ಲಖನೌ: ಉತ್ತರ ಪ್ರದೇಶದ ಲಖನೌನ ಮಾಯಾವತಿ ಕಾಲೋನಿಯ ಮನೆಯೊಂದರಲ್ಲಿ ಬುಧವಾರ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಆರು ತಿಂಗಳ ಮಗು ಸೇರಿದಂತೆ ಐವರು ಸಜೀವ ದಹನವಾಗಿದ್ದಾರೆ.
ಪ್ರತಾಪಗಢ ನಿವಾಸಿ ಟಿಎನ್ ಸಿಂಗ್ ಅವರು ತಮ್ಮ ಮನೆಯಲ್ಲಿಯೇ ಗ್ಯಾಸ್ ಸ್ಟೌವ್ ಗೋದಾಮು ಹೊಂದಿದ್ದು, ಎಲ್ಲರೂ ಮಲಗಿದ್ದಾಗ ರಾತ್ರಿ 1.30ರ ಸುಮಾರಿಗೆ ಮನೆಯ ಎಸಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಇಂದಿರಾ ನಗರ ಪೊಲೀಸ್ ಠಾಣೆಯ ಅಧಿಕಾರಿ ಅಮರನಾಥ್ ವಿಶ್ವಕರ್ಮ ಅವರು ತಿಳಿಸಿದ್ದಾರೆ.
ಶಾರ್ಟ್ ಸರ್ಕ್ಯೂಟ್ ನಿಂದ ಎಸಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬಳಿಕ ಬೆಂಕಿ ಗ್ಯಾಸ್ ಸ್ಟೌವ್ ಗಳಿಗೂ ವ್ಯಾಪಿಸಿದೆ. ಪರಿಣಾಮ ಐವರು ಸಜೀವ ದಹನಗೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.
ಮೃತರನ್ನು ಸುಮಿತ್ ಸಿಂಗ್, ಆತನ ಪತ್ನಿ ಜ್ಯೂಲಿ, ಅವರ ಆರು ತಿಂಗಳ ಮಗಳು, ದಬ್ಲು ಸಿಂಗ್ ಹಾಗೂ ವಂದನಾ ಸಿಂಗ್ ಎಂದು ಗುರುತಿಸಲಾಗಿದೆ.