ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಕಾರ್ಯಕರ್ತನೊಬ್ಬ ಕಪಾಳಮೋಕ್ಷ ಮಾಡಿದ್ದು ಈ ಸಂಬಂಧ ಎಎಪಿ ನಾಯಕರು ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಗೂಬೆ ಕೂರಿಸಲು ಮುಂದಾಗಿದ್ದರು. ಆದರೆ ಇದೀಗ ದೆಹಲಿ ಪೊಲೀಸರು ಕೇಜ್ರಿವಾಲ್ ಕಪಾಳಕ್ಕೆ ಬಾರಿಸಿದ್ದು ಬಿಜೆಪಿ ಕಾರ್ಯಕರ್ತನಲ್ಲ ಬದಲಿಗೆ ಅಸಮಾದಾನಿತ ಎಎಪಿ ಕಾರ್ಯಕರ್ತ ಎಂದು ತಿಳಿಸಿದ್ದಾರೆ.