ಕಳೆದ ಮೂರು ದಿನಗಳ ಹಿಂದೆ ಒಡಿಶಾಗೆ ಅಬ್ಬರಿಸಿದ ಫೋನಿ ಚಂಡಮಾರುತದ ಅಬ್ಬರಕ್ಕೆ ಈ ವರೆಗೂ ಬಲಿಯಾದವರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದ್ದು, ಚಂಡಮಾರುತದ ಅಬ್ಬರಕ್ಕೆ ಒಡಿಶಾದ ಪುರಿ ಸೇರಿದಂತೆ ಕರಾವಳಿ ತೀರದ ಜಿಲ್ಲೆಗಳಲ್ಲಿ ಭಾರಿ ಅವಾಂತರ ಸೃಷ್ಟಿಯಾಗಿದೆ. ವಿದ್ಯುತ್ ಕಂಬಗಳು, ಮನೆಗಳು, ಗುಡಿಸಲುಗಳು, ಮರಗಳು ಧರೆಗುರುಳಿದ್ದು ಜನಜೀವನ ಅಸ್ತವ್ಯಸ್ಥವಾಗಿದೆ.