ಸೂಕ್ತ ಮುನ್ಸೂಚನೆ ಹಾಗೂ ಮುನ್ನೆಚ್ಚರಿಕೆ ಕ್ರಮಗಳ ಮೂಲಕ ಪ್ರಾಣಹಾನಿ ಕಡಿಮೆ ಮಾಡಿದ್ದಕ್ಕಾಗಿ ವಿಶ್ವಸಂಸ್ಥೆಯು ಭಾರತದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದೆ. ಕಳೆದ 20 ವರ್ಷಗಳಲ್ಲೇ ಅತ್ಯಂತ ತೀವ್ರ ಎನ್ನಲಾದ ಫೊನಿ ಚಂಡಮಾರುತದ ಬಗ್ಗೆ ಹವಮಾನ ಇಲಾಖೆ ಹಾಗೂ ರಾಜ್ಯ ಸರ್ಕಾರಗಳು ನಿರ್ಲಕ್ಷ್ಯ ವಹಿಸಿದ್ದರೆ, ಸಾವಿರಾರು ಮಂದಿ ಬಲಿಯಾಗುವ ಸಾಧ್ಯತೆಯಿತ್ತು. ಆದರೆ, ವಿಶ್ವಸಂಸ್ಥೆಯ ವಿಪತ್ತು ನಿರ್ವಹಣಾ ನಿಯಮಗಳನ್ನು ಅನುಸರಿಸುವ ಮೂಲಕ ಸರ್ಕಾರಗಳು ಭಾರಿ ಅನಾಹುತ ತಪ್ಪಿಸಿವೆ ಎಂದು ವಿಶ್ವಸಂಸ್ಥೆ ಹೇಳಿದೆ.