ನವ ದೆಹಲಿ: ಕಣಿವೆ ರಾಜ್ಯ ಜಮ್ಮು- ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಬಿಜೆಪಿ ಮುಖಂಡ ಹತ್ಯೆಯಾಗಿರುವುದನ್ನು ಪ್ರಧಾನಿ ನರೇಂದ್ರ ಮೋದಿ ಖಂಡಿಸಿದ್ದಾರೆ. ದೇಶದಲ್ಲಿ ಹಿಂಸಾಚಾರಕ್ಕೆ ಅವಕಾಶ ಇಲ್ಲ ಎಂದು ಅವರು ಹೇಳಿದ್ದಾರೆ.
ಕಳೆದ ರಾತ್ರಿ ಅನಂತ್ ನಾಗ್ ಜಿಲ್ಲೆಯ ಮನೆಯೊಂದರಲ್ಲಿ ಉಗ್ರರು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಗುಲಾಮ್ ಮೊಹಮ್ಮದ್ ಮಿರ್ ಅವರನ್ನು ಗುಂಡಿಟ್ಟು ಹತ್ಯೆ ಮಾಡಿದ್ದರು.
ಜಮ್ಮು- ಕಾಶ್ಮೀರದಲ್ಲಿ ಪಕ್ಷ ಸಂಘಟನೆಗೆ ಗುಲಾಮ್ ಮೊಹಮ್ಮದ್ ಮಿರ್ ಕೊಡುಗೆ ಸದಾ ಕಾಲ ನೆನಪಿನಲ್ಲಿ ಉಳಿಯುವಂತಹದಾಗಿದ್ದು, ಅವರ ಹತ್ಯೆಯನ್ನು ಬಲವಾಗಿ ಖಂಡಿಸುವುದಾಗಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.
Advertisement