ಪ್ರಧಾನಿ ನರೇಂದ್ರ ಮೋದಿ ದುರ್ಯೋಧನ: ಪ್ರಿಯಾಂಕಾ ವಾದ್ರಾ

ಪ್ರಧಾನಿ ನರೇಂದ್ರ ಮೋದಿ ಅವರನ್ನು ದುರ್ಯೋಧನ ಎಂದು ಪ್ರಿಯಾಂಕಾ ವಾದ್ರಾ ಕರೆದಿರುವುದು ಇದೀಗ ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದೆ.
ನರೇಂದ್ರ ಮೋದಿ-ಪ್ರಿಯಾಂಕಾ ವಾದ್ರಾ
ನರೇಂದ್ರ ಮೋದಿ-ಪ್ರಿಯಾಂಕಾ ವಾದ್ರಾ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ದುರ್ಯೋಧನ ಎಂದು ಪ್ರಿಯಾಂಕಾ ವಾದ್ರಾ ಕರೆದಿರುವುದು ಇದೀಗ ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದೆ.
ಹರಿಯಾಣದಲ್ಲಿ ಇಂದು ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಪ್ರಿಯಾಂಕಾ ವಾದ್ರಾ ಪ್ರಧಾನಿ ಮೋದಿ ಮಹಾಭಾರತದ ದುರ್ಯೋಧನನಂತೆ ಅಕ್ರಮಣಕಾರಿ. ಇದೇ ಕಾರಣಕ್ಕೆ ಅವರು ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಸೋಲು ಕಾಣುತ್ತಾರೆ ಎಂದು ಪ್ರಿಯಾಂಕಾ ಗಾಂಧಿ ಹರಿಹಾಯ್ದಿದ್ದರು. ತಮ್ಮ ತಂದೆ ರಾಜೀವ್ ಗಾಂಧಿ ಅವರನ್ನು ನಂಬರ್ 1 ಭ್ರಷ್ಟಾಚಾರಿ ಎಂದು ಪ್ರಧಾನಿ ಮೋದಿ ಕರೆದಿದ್ದನ್ನೂ ಪ್ರಿಯಾಂಕಾ ಖಂಡಿಸಿದರು.
ಪ್ರಿಯಾಂಕಾ ವಾದ್ರಾ ಹೇಳಿಕೆಗೆ ತಿರುಗೇಟು ನೀಡಿರುವ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಈ ಬಾರಿ ಲೋಕಸಭೆ ಚುನಾವಣೆಯ ಫಲಿತಾಂಶವೇ ಪ್ರಿಯಾಂಕಾರಿಗೆ ತಕ್ಕ ಪಾಠ ಕಲಿಸುತ್ತದೆ. ಈ ತರದ ಹೇಳಿಕೆಗಳೆಲ್ಲಾ ಕಾಂಗ್ರೆಸ್ ನ ಹತಾಷೆಯ ಮನೋಭಾವವನ್ನು ತೋರಿಸುತ್ತದೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com