ನವದೆಹಲಿ: ಫೋನಿ ಚಂಡಮಾರುತ ಪೀಡಿತ ಒಡಿಶಾ ರಾಜ್ಯದ ಪುನರ್ ನಿರ್ಮಾಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ನೀಡಿದ್ದ ಭರವಸೆಯಂತೆ 1 ಸಾವಿರ ಕೋಟಿ ರೂಪಾಯಿಯನ್ನು ಕೇಂದ್ರ ಗೃಹ ಸಚಿವಾಲಯ ಇಂದು ಬಿಡುಗಡೆ ಮಾಡಿದೆ.
ಹೆಚ್ಚುವರಿ ಹಣದಲ್ಲಿ 341 ಕೋಟಿ ರೂಪಾಯಿಯನ್ನು ಒಡಿಶಾ ರಾಜ್ಯ ವಿಪತ್ತು ನಿರ್ವಹಣಾ ಪಡೆಗೆ ಈಗಾಗಲೇ ಬಿಡುಗಡೆ ಮಾಡಲಾಗಿದೆ ಎಂದು ಗೃಹ ಸಚಿವಾಲಯ ತಿಳಿಸಿದೆ.
ಕಳೆದ 43 ವರ್ಷಗಳಲ್ಲಿ ಮೇ 3 ರಂದು ಮೊದಲ ಬಾರಿಗೆ ಸಂಭವಿಸಿದ್ದ ಅಪರೂಪದ ಬೇಸಿಗೆ ಫೋನಿ ಚಂಡಮಾರುತದಲ್ಲಿ 35 ಮಂದಿ ಮೃತಪಟ್ಟಿದ್ದರು.ವಿದ್ಯುತ್, ದೂರಸಂಪರ್ಕ ಹಾಗೂ ಕುಡಿಯುವ ನೀರು ಪೂರೈಕೆ ಸಂಪೂರ್ಣ ಅಸ್ತವ್ಯಸ್ತಗೊಂಡಿತ್ತು.
Advertisement