ಭುವನೇಶ್ವರ್: ದೆಹಲಿ-ಭುವನೇಶ್ವರ್ ನಡುವೆ ಸಂಚರಿಸುವ ರಾಜಧಾನಿ ಎಕ್ಸ್ಪ್ರೆಸ್ ರೈಲಿನಲ್ಲಿ ಶನಿವಾರ ಅಗ್ನಿ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್ ಪ್ರಯಾಣಿಕರು ಯಾವುದೇ ಹಾನಿ ಇಲ್ಲದೆ ಪಾರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇಂದು ಬೆಳಗಿನ ಮಧ್ಯಾಹ್ನ 12.50 ರಿಂದ 1 ಗಂಟೆ ವೇಳೆ ರೈಲಿನ ಕೊನೆಯಲ್ಲಿರುವ ಜನರೇರ್ಟ್ ಕೋಚ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣ ರೈಲನ್ನು ನಿಲ್ಲಿಸಿ ಬೇರೆ ಬೋಗಿಗಳನ್ನು ಬೇರ್ಪಡಿಸಿ ಬೆಂಕಿ ಇತರೆ ಬೋಗಿಗಳಿಗೆ ವ್ಯಾಪಿಸುವುದನ್ನು ತಡೆಯಲಾಗಿದೆ.
ಖರಗಪುರದ ವಿಭಾಗದಲ್ಲಿ ಖಂತಪಡದಲ್ಲಿ ಈ ಅವಘಡ ಸಂಭವಿಸಿದ್ದು, ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬಂದಿಗಳು ಆಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ.
ರೈಲಿನಲ್ಲಿದ್ದ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದು, ಅವಘಡದಲ್ಲಿ ಯಾರೊಬ್ಬರಿಗೂ ಗಾಯಗಳಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.