ಗುಜರಾತ್ ರಾಜ್ಯದ ಮೆಹ್ಸಾನಾ ಜಿಲ್ಲೆಯ ಲಾರ್ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಇದು ಉಪ ಮುಖ್ಯಮಂತ್ರಿ ನಿತಿನ್ ಪಟೇಲ್ ಅವರ ತವರು ಜಿಲ್ಲೆಯಾಗಿದೆ. ತಮ್ಮನ್ನು ಬಹಿಷ್ಕಾರ ಹಾಕಿರುವುದರಿಂದ ಹಾಲು ಸೇರಿದಂತೆ ಮಾರುಕಟ್ಟೆಯಲ್ಲಿ ಅಗತ್ಯ ವಸ್ತುಗಳು ಸಿಗುತ್ತಿಲ್ಲ, ನಾವು ಹೋಗಿ ಕೇಳಿದರೆ ಕೊಡಲು ನಿರಾಕರಿಸುತ್ತಾರೆ. ಆಟೋರಿಕ್ಷಾ ಚಾಲಕರು ಕೂಡ ಮೇಲ್ಜಾತಿಯವರ ಭಯದಿಂದ ನಮ್ಮನ್ನು ವಾಹನಕ್ಕೆ ಹತ್ತಲು ಬಿಡುವುದಿಲ್ಲ ಎಂದು ಗ್ರಾಮದ ದಲಿತರು ಹೇಳುತ್ತಾರೆ.