ಇದೇ ರೀತಿ ಕರ್ನಾಟಕದ ಸಂಸದ ಹಾಗೂ ಬಿಜೆಪಿ ಮುಖಂಡ ನಳೀನ್ ಕುಮಾರ್ ಕಟೀಲ್ ಅವರೂ ಕೂಡ ಗೋಡ್ಸೆ ಪರ ವಕಾಲತ್ತು ವಹಿಸಿದ್ದರು. ಈ ಬಗ್ಗೆ ಟ್ವೀಟ್ ಮಾಡಿದ್ದ ನಳೀನ್ ಕುಮಾರ್ ಕಟೀಲ್, ' ಗಾಂಧಿಯನ್ನು ಕೊಂದ ಗೋಡ್ಸೆ 'ಹಿಂದೂ ಉಗ್ರ'ನಾಗಲು ಹೇಗೆ ಸಾಧ್ಯ? ಗೋಡ್ಸೆ ಕೊಂದವರ ಸಂಖ್ಯೆ 1, ಅಜ್ಮಲ್ ಕಸಬ್ ಕೊಂದವರ ಸಂಖ್ಯೆ 72, ರಾಜೀವ್ ಗಾಂಧಿ ಕೊಂದವರ ಸಂಖ್ಯೆ 17,000 ಈಗ ನೀವೇ ಹೇಳಿ ಇವರಲ್ಲಿ ಅತೀ ಕ್ರೂರ ಕೊಲೆಗಾರ ಯಾರು? . ಎಂದು ಪ್ರಶ್ನೆ ಮಾಡಿದ್ದರು.