2019 ರ ಲೋಕಸಭಾ ಚುನಾವಣೆಗೆ ಬಹಿರಂಗ ಪ್ರಚಾರ ಅಂತ್ಯಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಕೇದಾರನಾಥ-ಬದ್ರಿನಾಥ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದರೆ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಗುಜರಾತ್ ನಲ್ಲಿರುವ ಸೋಮನಾಥ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
Prime Minister Narendra Modi meditates at a holy cave near Kedarnath Shrine in Uttarakhand. pic.twitter.com/KbiDTqtwwE
ಕೇದಾರನಾಥ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ನಂತರ ಅಲ್ಲಿನ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆಯನ್ನೂ ನಡೆಸಿದರು. ಪರಿಶೀಲನೆ ಮುಕ್ತಾಯಗೊಂಡ ಬಳಿಕ ದೇವಾಲಯದಿಂದ 1.5 ಕಿ.ಮೀ ದೂರವಿರುವ ಗುಹೆಗೆ ಮಳೆಯನ್ನೂ ಲೆಕ್ಕಿಸದೇ ತೆರಳಿ, ಧ್ಯಾನ ಮಗ್ನರಾದರು. ಪ್ರಧಾನಿ ನರೇಂದ್ರ ಮೋದಿ ಗುಹೆಯಲ್ಲಿ ಧ್ಯಾನ ಮಗ್ನರಾಗಿರುವ ವಿಡಿಯೋ ವೈರಲ್ ಆಗುತ್ತಿದೆ.