ಮಳೆಯನ್ನೂ ಲೆಕ್ಕಿಸದೇ ಕೇದಾರನಾಥ ಗುಹೆಗೆ ತೆರಳಿ ಪ್ರಧಾನಿ ಮೋದಿ ಧ್ಯಾನ!

ಕೇದಾರನಾಥ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ ದೇಗುಲದಿಂದ ದೂರವಿರುವ ಗುಹೆಯಲ್ಲಿ ಕುಳಿತು ಧ್ಯಾನ ಮಾಡಿದ್ದಾರೆ.
ಮಳೆಯನ್ನೂ ಲೆಕ್ಕಿಸದೇ ಕೇದಾರನಾಥ ಗುಹೆಯಲ್ಲಿ ಪ್ರಧಾನಿ ಮೋದಿ ಧ್ಯಾನ!
ಮಳೆಯನ್ನೂ ಲೆಕ್ಕಿಸದೇ ಕೇದಾರನಾಥ ಗುಹೆಯಲ್ಲಿ ಪ್ರಧಾನಿ ಮೋದಿ ಧ್ಯಾನ!
ಕೇದಾರನಾಥ: ಕೇದಾರನಾಥ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ ದೇಗುಲದಿಂದ ದೂರವಿರುವ ಗುಹೆಯಲ್ಲಿ ಕುಳಿತು ಧ್ಯಾನ ಮಾಡಿದ್ದಾರೆ. 
2019 ರ ಲೋಕಸಭಾ ಚುನಾವಣೆಗೆ ಬಹಿರಂಗ ಪ್ರಚಾರ ಅಂತ್ಯಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಕೇದಾರನಾಥ-ಬದ್ರಿನಾಥ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದರೆ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಗುಜರಾತ್ ನಲ್ಲಿರುವ ಸೋಮನಾಥ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. 
ಕೇದಾರನಾಥ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ನಂತರ ಅಲ್ಲಿನ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆಯನ್ನೂ ನಡೆಸಿದರು. ಪರಿಶೀಲನೆ ಮುಕ್ತಾಯಗೊಂಡ ಬಳಿಕ  ದೇವಾಲಯದಿಂದ 1.5 ಕಿ.ಮೀ ದೂರವಿರುವ ಗುಹೆಗೆ  ಮಳೆಯನ್ನೂ ಲೆಕ್ಕಿಸದೇ  ತೆರಳಿ, ಧ್ಯಾನ ಮಗ್ನರಾದರು. ಪ್ರಧಾನಿ ನರೇಂದ್ರ ಮೋದಿ ಗುಹೆಯಲ್ಲಿ ಧ್ಯಾನ ಮಗ್ನರಾಗಿರುವ ವಿಡಿಯೋ ವೈರಲ್ ಆಗುತ್ತಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com