ಆರ್ ಎಸ್ಎಸ್ ಹಾಗೂ ಬಿಜೆಪಿ ಪ್ರಮುಖ ನಾಯಕ ಬಿ.ಎಲ್. ಸಂತೋಷ್, ಸಿ.ಟಿ.ರವಿ , ನಿರ್ಮಲ್ ಕುಮಾರ್ ಸುರಾನಾ, ಭಾನುಪ್ರಕಾಶ್ ಸೇರಿದಂತೆ ಎಲ್ಲಾ ಜಿಲ್ಲೆಯ ಸಂಘಟನಾ ಕಾರ್ಯದರ್ಶಿಗಳು ಅಂಡಮಾನ್ ನಿಕೋಬಾರ್ ಗೆ ತೆರಳಿದ್ದಾರೆ. ಅಲ್ಲಿ ಮುಂದಿನ ಚುನಾವಣಾ ಫಲಿತಾಂಶ, ಪಕ್ಷ ಸಂಘಟನೆ, ಹಾಗೂ ಮುಂದಿನ ಕಾರ್ಯತಂತ್ರಗಳ ಬಗ್ಗೆ ಚರ್ಚೆ ನಡೆಸಲಾಗಿದೆ ಎನ್ನಲಾಗಿದೆ.