ಬಿಜೆಪಿ ಪತ್ರದ ಬಗ್ಗೆ ಪ್ರತಿಕ್ರಿಯಿಸಿದ ಕಮಲ್ ನಾಥ್, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದ ದಿನದಿಂದಲೂ ಬಿಜೆಪಿ ಸರ್ಕಾರ ಅಸ್ಥಿರಗೊಳಿಸುವ ಯತ್ನ ನಡೆಸಿದೆ. ಕಳೆದ ಐದು ತಿಂಗಳಲ್ಲಿ ನಾನು ಕನಿಷ್ಠ ನಾಲ್ಕು ಬಾರಿ ಬಹುಮತ ಸಾಬೀತುಪಡಿಸಿದ್ದೇನೆ. ಆದರೂ ಅವರು ಸರ್ಕಾರ ಅಸ್ಥಿರಗೊಳಿಸಲು ಎಲ್ಲಾ ರೀತಿಯ ಯತ್ನಗಳನ್ನು ಮಾಡುತ್ತಿದ್ದಾರೆ. ಸರ್ಕಾರ ಈಗಲೂ ಬಹುಮತ ಸಾಬೀತುಪಡಿಸಲು ಸಿದ್ಧವಿದೆ ಎಂದಿದ್ದಾರೆ.