ಅಹ್ಮದಾಬಾದ್: ರಾಫೆಲ್ ಡೀಲ್ ಗೆ ಕುರಿತ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರು ಹಾಗೂ ನ್ಯಾಶನಲ್ ಹೆರಾಲ್ಡ್ ಪತ್ರಿಕೆಯ ವಿರುದ್ಧ ಅಹ್ಮದಾಬಾದ್ ಕೋರ್ಟ್ ನಲ್ಲಿ ದಾಖಲಿಸಿದ್ದ 5 ಸಾವಿರ ಕೋಟಿ ರುಪಾಯಿಗಳ ಮಾನನಷ್ಟ ಮೊಕದ್ದಮೆ ಪ್ರಕರಣವನ್ನು ಹಿಂಪಡೆಯಲು ಅನಿಲ್ ಅಂಬಾನಿ ಅವರ ರಿಲಯನ್ಸ್ ಗ್ರೂಪ್ ನಿರ್ಧರಿಸಿದೆ.