ನಾನು ಕಾಂಗ್ರೆಸ್ ಪಕ್ಷದಂತಲ್ಲ, ನಾನು ಯಾವುದೇ ಕಾರಣಕ್ಕೂ ಶರಣಾಗುವುದಿಲ್ಲ. ಈ ದೇಶ ಎಲ್ಲರಿಗೂ ಸೇರಿದ್ದು, ನಾನು ಹಿಂದು ಧರ್ಮಕ್ಕೆ ಸೇರಿದವಳಾಗಿದ್ದೇನೆ. ಆದರೆ, ಮುಸ್ಲಿಮರನ್ನು ಕಡೆಗಣಿಸಲು ಸಾಧ್ಯವಿಲ್ಲ. ಈ ಚುನಾವಣೆಯಲ್ಲಿ ಗುಂಡು ಹಾರಿಸಲಾಗಿದೆ, ಹಿಂಸಾಚಾರ ನಡೆದಿದೆ. ಬಿಜೆಪಿ ಕೇಂದ್ರೀಯ ಭದ್ರತಾ ಪಡೆಗಳನ್ನು ನಿಯಂತ್ರಿಸಿದೆ. ಬಿಜೆಪಿ ದೆಹಲಿಯಲ್ಲಿ, ರಾಜಸ್ಥಾನ ಮತ್ತು ಗುಜರಾತ್ನಲ್ಲಿ ಎಲ್ಲಾ ಕ್ಷೇತ್ರಗಳಲ್ಲೂ ಹೇಗೆ ಗೆಲುವು ಸಾಧಿಸಿದೆ. ನಾನು ಇದನ್ನು ನಂಬುವುದಿಲ್ಲ ಎಂದು ಮಮತಾ ಬ್ಯಾನರ್ಜಿ ಬಿಜೆಪಿ ವಿರುದ್ಧ ಕಿಡಿಕಾರಿದರು.