ಗೋ ಮಾಂಸ ಸಾಗಿಸುತ್ತಿದ್ದಾರೆ ಎಂಬ ಶಂಕೆ ಮೇಲೆ ಮಹಾರಾಷ್ಟ್ರದಲ್ಲಿ ಮುಸ್ಲಿಂ ಯುವಕರ ಮೇಲೆ ಹಲ್ಲೆಯಾಗಿದೆ ಎಂಬ ಮಾಧ್ಯಮ ವರದಿಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಓವೈಸಿ, ದೇಶದಲ್ಲಿ ಮುಸ್ಲಿಂರು ಆತಂಕದಲ್ಲಿಯೇ ಕಾಲ ಕಳೆಯುತ್ತಿದ್ದಾರೆ. ಕಳೆದ ಐದು ವರ್ಷಗಳಿಂದ ದೇಶದ ಪ್ರತಿಯೊಬ್ಬರ ರಕ್ಷಣೆ ಅಂತ ನರೇಂದ್ರ ಮೋದಿ ಹೇಳುತ್ತಾ ಬಂದಿದ್ದಾರೆ. ಆದರೆ ಇದು ಬರೀ ಬೂಟಾಟಿಕೆ ಹಾಗೂ ವಿರೋಧಭಾಸ ಎಂದು ದೂರಿದರು.