ನಂತರ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಪಾಯಲ್ ಆತ್ಮಹತ್ಯೆ ಕೇಸ್ ಮಹಾರಾಷ್ಟ್ರ ಸರ್ಕಾರಕ್ಕೂ ಬಿಸಿ ಮುಟ್ಟಿಸಿತ್ತು. ನಂತರ ಸಿಎಂ ದೇವೇಂದ್ರ ಪಡ್ನವಿಸ್ ಪ್ರಕರಣ ಸಂಬಂಧ ತನಿಖೆಯನ್ನ ಚುರುಕುಗೊಳಿಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದರು. ಸದ್ಯ ಓರ್ವ ಆರೋಪಿಯನ್ನ ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದಾರೆ. ಇನ್ನಿಬ್ಬರು ಆರೋಪಿಗಳಾದ ಡಾ.ಹೇಮಾ, ಡಾ. ಅಂಕಿತಾ ಖಂಡಲೆವಾಲ್ ತಲೆ ಮರೆಸಿಕೊಂಡಿದ್ದು, ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.