ಪ್ರಧಾನಿ ಮೋದಿಯನ್ನು ಹಾಡಿ ಹೊಗಳಿದ ಕೇರಳ ಕಾಂಗ್ರೆಸ್ ನಾಯಕ

ಕೇರಳ ಕಾಂಗ್ರೆಸ್ ನಾಯಕ ಎಪಿ ಅಬ್ದುಲ್ಲಾ ಕುಟ್ಟಿ ಅವರು ಲೋಕಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿ ಮತ್ತೆ ಅಧಿಕಾರಕ್ಕೇರುತ್ತಿರುವ...
ಎಪಿ ಅಬ್ದುಲ್ಲಾ ಕುಟ್ಟಿ
ಎಪಿ ಅಬ್ದುಲ್ಲಾ ಕುಟ್ಟಿ
ತಿರುವನಂತಪುರಂ: ಕೇರಳ ಕಾಂಗ್ರೆಸ್ ನಾಯಕ ಎಪಿ ಅಬ್ದುಲ್ಲಾ ಕುಟ್ಟಿ ಅವರು ಲೋಕಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿ ಮತ್ತೆ ಅಧಿಕಾರಕ್ಕೇರುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹಾಡಿ ಹೊಗಳಿ ವಿವಾದಕ್ಕೆ ಸಿಲುಕಿದ್ದು, ಪಕ್ಷ ಸ್ಪಷ್ಟನೆ ಕೇಳಿ ನೋಟಿಸ್ ಜಾರಿ ಮಾಡಿದೆ.
ಎನ್ ಡಿಎ ವಿಜಯೋತ್ಸವಕ್ಕೆ ಮೋದಿಯ ಅಭಿವೃದ್ಧಿಯ ಅಜೆಂಡಾ ಕಾರಣ ಎಂದಿರುವ ಕಾಂಗ್ರೆಸ್ ನಾಯಕ, ಪ್ರಧಾನಿ ಗಾಂಧಿಯ ಮೌಲ್ಯಗಳನ್ನು ಅಳವಡಿಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ.
ನಗರ, ಪಟ್ಟಣ ಹಾಗೂ ಹಳ್ಳಿಗಳ ಸ್ವಚ್ಛತೆಗೆ ಒತ್ತು ನೀಡಿದ ಕೇಂದ್ರ ಸರ್ಕಾರದ ಸ್ವಚ್ಛ ಭಾರತ ಅಭಿಯಾನ, ಉಜ್ವಲ ಯೋಜನೆ ಬಗ್ಗೆ ಅಬ್ದುಲ್ಲಾ ಕುಟ್ಟಿ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ನರೇಂದ್ರ ಮೋದಿಯ ಪ್ರಭಾವಶಾಲಿ ವಿಜಯ ಎಂದು ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿರುವ ಮಾಜಿ ಸಂಸದ ಅಬ್ದುಲ್ಲಾ ಕುಟ್ಟಿ, ಕೇಸರಿ ಪಡೆಯ ಈ ಗೆಲುವು ಪ್ರತಿಪಕ್ಷಗಳಿಗೆ ಮಾತ್ರವಲ್ಲದೆ ಬಿಜೆಪಿಗೂ ಅಚ್ಚರಿ ಮೂಡಿಸಿದೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com