ಇತ್ತೀಚೆಗಷ್ಟೇ ತಮ್ಮದೇ ನೂತನ ಪಕ್ಷದ ಮೂಲಕ ರಾಜಕೀಯಕ್ಕೆ ಪ್ರವೇಶ ಮಾಡಿರುವ ರಜನಿಕಾಂತ್ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ಬೆನ್ನಿಗೆ ನಿಂತಿದ್ದು, ಚುನಾವಣೆಯಲ್ಲಿ ಸೋತ ಮಾತ್ರಕ್ಕೆ ರಾಹುಲ್ ಗಾಂಧಿ ರಾಜಿನಾಮೆ ನಿರ್ಧಾರ ತಳೆಯುವುದು ಸರಿಯಲ್ಲ ಎಂದು ಹೇಳಿದ್ದಾರೆ. ಅಂತೆಯೇ ರಾಹುಲ್ ಗಾಂಧಿಗೆ ಕಿವಿಮಾತು ಹೇಳಿರುವ ಅವರು, ರಾಹುಲ್ ತಾವು ಸಮರ್ಥರು ಎಂಬುದನ್ನು ತೋರಿಸಬೇಕು. ಪ್ರಜಾ ಪ್ರಭುತ್ವದಲ್ಲಿ ಸಮರ್ಥ ಸರ್ಕಾರ ಮಾತ್ರವಲ್ಲ, ಸಮರ್ಥ ಮತ್ತ ಬಲಿಷ್ಠ ವಿಪಕ್ಷದ ಅಗತ್ಯವೂ ಇದೆ. ಹೀಗಾಗಿ ರಾಹುಲ್ ಗಾಂಧಿ ರಾಜಿನಾಮೆ ನಿರ್ಧಾರವನ್ನು ಹಿಂದಕ್ಕೆ ಪಡೆಯಬೇಕು ಎಂದು ಹೇಳಿದ್ದಾರೆ.