ಕಳೆದ ಹಲವು ತಿಂಗಳಿನಿಂದ ಕೇಂದ್ರ ಸರ್ಕಾರದೊಂದಿಗೆ ತೀವ್ರ ಸಂಘರ್ಷ ನಡೆಸಿದ್ದ ಮಮತಾ ಬ್ಯಾನರ್ಜಿ ಅವರು, ಚುನಾವಣೆ ಸಂದರ್ಭದಲ್ಲಿ ಬಿಜೆಪಿ ವಿರುದ್ಧ ತೀವ್ರ ಹರಿಹಾಯ್ದಿದ್ದರು. ಆದರೆ, ಚುನಾವಣೆಯಲ್ಲಿ ಅವರು ನಿರೀಕ್ಷಿಸಿರದ ರೀತಿಯಲ್ಲಿ ಸೋಲಿನ ಆಘಾತ ಎದುರಿಸಿದ್ದರು. ಅದರ ಬೆನ್ನಲ್ಲೇ ಟಿಎಂಸಿಯ ನಾಯಕರು, ಕೌನ್ಸಿಲರ್ಗಳು ಬಿಜೆಪಿ ಸೇರ್ಪಡೆಯಾಗಿದ್ದರು. ಈ ಎಲ್ಲ ಬೆಳವಣಿಗೆಗಳಿಂದ ಕುದಿಯುತ್ತಿರುವ ಮಮತಾ ಅವರು ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸುವುದಿಲ್ಲ ಎನ್ನಲಾಗಿತ್ತು.