ಇನ್ನು ತಮಗೆ ಸಚಿವ ಸ್ಥಾನ ಸಿಗುವ ವಿಚಾರವನ್ನು ಸ್ವತಃ ಸಂಸದ ಡಿ ವಿ ಸದಾನಂದ ಗೌಡ ಅವರೇ ಖಚಿತಪಡಿಸಿದ್ದಾರೆ. ನನಗೆ ಖುದ್ದು ಅಮಿತ್ ಶಾ ಅವರೇ ಕರೆ ಮಾಡಿ ಪ್ರಧಾನಿಯವರ ನಿವಾಸದಲ್ಲಿ ಸಂಜೆ 5ಗಂಟೆಯೊಳಗೆ ಇರಬೇಕೆಂದು ಸೂಚಿಸಿದ್ದಾರೆ. ಪ್ರಧಾನಿ ನಿವಾಸದಲ್ಲಿ ಸಂಜೆ ಚಹಾ ಕೂಟ ನಡೆಸಿ ಅಲ್ಲಿಂದ ನೇರವಾಗಿ ರಾಷ್ಟ್ರಪತಿ ಭವನಕ್ಕೆ ತೆರಳಿ ಪ್ರಮಾಣವಚನ ಸ್ವೀಕರಿಸಲಿದ್ದೇವೆ ಎಂದು ಸದಾನಂದ ಗೌಡ ತಿಳಿಸಿದ್ದಾರೆ.
ಉತ್ತರಪ್ರದೇಶದ ಸಂಸದ ಮುಕ್ತಾರ್ ಅಬ್ಬಾಸ್ ನಖ್ವಿ, ಅಮೇಥಿಯಲ್ಲಿ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿಯನ್ನು ಸೋಲಿಸಿದ ಸಂಸದೆ ಸ್ಮೃತಿ ಇರಾನಿ, ಮಾಜಿ ಗೃಹಖಾತೆ ಸಚಿವ ರಾಜ್ನಾಥ್ ಸಿಂಗ್, ಮಧ್ಯಪ್ರದೇಶದ ಸಂಸದ ಪ್ರಹ್ಲಾದ್ ಪಟೇಲ್, ಮಹಾರಾಷ್ಟ್ರ ಸಂಸದರಾದ ಪ್ರಕಾಶ್ ಜಾವ್ಡೇಕರ್, ರಾಮ್ದಾಸ್ ಅಠಾವಳೆ, ಪಿಯೂಶ್ ಗೋಯಲ್.
ಬಿಹಾರದ ಸಂಸದ ಶಂಕರ್ ಪ್ರಸಾದ್, ಜಮ್ಮು-ಕಾಶ್ಮೀರದ ಡಾ. ಜೀತೇಂದ್ರ ಸಿಂಗ್, ಪಶ್ಚಿಮ ಬಂಗಾಳದ ಬಾಬುಲ್ ಸುಪ್ರಿಯೋ, ತೆಲಂಗಾಣದ ಸಂಸದ ಕೃಷ್ಣ ರೆಡ್ಡಿ ಚಂಡಿಘಡ್ನ ಹರ್ಷಿಮ್ರತ್ ಕೌರ್ ಬಾದಲ್ ಹಾಗೂ ಗುಜರಾತ್ ರಾಜ್ಯಸಭಾ ಸದಸ್ಯರಾದ ಪುರುಷೋತ್ತಮ್ ರುಪಾಲ ಮನ್ಸುಕ್ ಎಲ್. ಮಾಂಡವಿಯಾ ಅವರಿಗೆ ಕೂಡ ಸಚಿವ ಸ್ಥಾನ ಬಹುತೇಕ ಖಚಿತವಾಗಿದೆ.ಇವರಿಗೆಲ್ಲಾ ಅಮಿತ್ ಶಾ ಅವರಿಂದ ಸಂಜೆ ಪ್ರಧಾನಿ ನಿವಾಸಕ್ಕೆ ಬರುವಂತೆ ಬುಲಾವ್ ಹೋಗಿದೆ.