ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ದಿಗ್ವಿಜಯ ಸಾಧಿಸಿದ ನಂತರ ತಮ್ಮ ಮೊದಲ ಬಾಷಣದಲ್ಲಿ ಪ್ರಧಾನಿ ಮೋದಿ, ಮತಬ್ಯಾಂಕ್ ರಾಜಕಾರಣದಿಂದ ಅಲ್ಪಸಂಖ್ಯಾತ ಮುಸ್ಲಿಮರು ನಲುಗಿದ್ದು, ಭಯದ ವಾತಾವರಣದಲ್ಲಿರುವ ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಿದೆ ಎಂದು ಹೇಳಿದ್ದರು.