ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಡಿವಿ ಸದಾನಂದ ಗೌಡರಿಗೆ ರಾಸಾಯನಿಕ ರಸಗೊಬ್ಬರ ಖಾತೆ ನೀಡಿದ್ದರೆ ಇದೇ ಮೊದಲ ಬಾರಿಗೆ ಕೇಂದ್ರ ಸಚಿವರಾಗಿ ಪ್ರಮಾಣ ಸ್ವೀಕರಿಸಿದ ಪ್ರಹ್ಲಾದ ಜೊಷಿಯವರಿಗೆ ಸಂಸದೀಯ ವ್ಯವಹಾರ, ಕಲ್ಲಿದ್ದಲು ಮತ್ತು ಗಣಿಗಾರಿಕೆ ಖಾತೆ ಜವಾಬ್ದಾರಿ ವಹಿಸಲಾಗಿದೆ. ಇನ್ನು ಬೆಳಗಾವಿ ಸಂಸದ ಸುರೇಶ್ ಅಂಗಡಿಯವರನ್ನು ರೈಲ್ವೆ ರಾಜ್ಯ ಖಾತೆ ಸಚಿವರಾಗಿ ಮಾಡಲಾಗಿದೆ.