ಇಂದು ಸಂಜೆ ರಾಷ್ಟ್ರಪತಿ ಭವನದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಎನ್ ಡಿಎ ಸಂಸದೀಯ ಮಂಡಳಿಯ ನಾಯಕ ನರೇಂದ್ರ ಮೋದಿ ಅವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು. ಬಿಮ್ ಸ್ಟೆಕ್ ದೇಶಗಳ ಮುಖ್ಯಸ್ಥರು ಸೇರಿದಂತೆ ಹಲವು ವಿದೇಶಿ ಗಣ್ಯರು, ರಾಜ್ಯಗಳ ಮುಖ್ಯಮಂತ್ರಿಗಳು, ರಾಜ್ಯಪಾಲರು, ಪ್ರತಿಪಕ್ಷಗಳ ನಾಯಕರು, ಮಾಜಿ ಪ್ರಧಾನಿಗಳು ಹಾಗೂ ಮಾಜಿ ರಾಷ್ಟ್ರಪತಿಗಳು ಸೇರಿದಂತೆ ಸಾವಿರಾರು ಗಣ್ಯರು ಸಮಾರಂಭದಲ್ಲಿ ಭಾಗವಹಿಸಿದ್ದರು.