ನಿಮ್ಮನ್ನು ಏನೆಂದುಕೊಂಡಿದ್ದೀರಿ? ಬೇರೆ ರಾಜ್ಯಗಳಿಂದ ಇಲ್ಲಿಗೆ ಬಂದು, ನಮ್ಮನ್ನೇ ನಿಂದಿಸುತ್ತೀರಾ? ಇದನ್ನು ಸಹಿಸಲು ಸಾಧ್ಯವಿಲ್ಲ. ನನ್ನನ್ನು ನಿಂದಿಸುವುದಕ್ಕೆ ಎಷ್ಟು ಧೈರ್ಯ, ನಿಮ್ಮೆಲ್ಲರ ಹೆಸರನ್ನೂ ಬರೆದುಕೊಳ್ಳಲಾಗಿದೆ ಎಂದು ಮಮತಾ ಬ್ಯಾನರ್ಜಿ ಘೋಷಣೆ ಕೂಗಿರುವ ಯುವಕರಿಗೆ ಹೇಳಿರುವುದು ವರದಿಯಾಗಿದೆ. ಇತ್ತೀಚಿನ ವರದಿ ಪ್ರಕಾರ ಮಮತಾ ಬ್ಯಾನರ್ಜಿ ಎದುರು ಜೈ ಶ್ರೀರಾಮ್ ಘೋಷಣೆ ಕೂಗಿದ ಯುವಕರ ಪೈಕಿ ಓರ್ವನನ್ನು ಬಂಧಿಸಲಾಗಿದೆ.