ಬಾಬರಿ ಮಸೀದಿ ತೀರ್ಪು ಹಿನ್ನೆಲೆ ಸಾಮಾಜಿಕ ತಾಣಗಳ ಮೇಲೆ ನಿರ್ಬಂಧ

ರಾಮಜನ್ಮಭೂಮಿ-ಬಾಬ್ರಿ ಮಸೀದಿ ಮೂಲ ನಿವೇಶನ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ತೀರ್ಪು ಸದ್ಯವೇ ಬರುವ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳ ನಿಯಂತ್ರಣಕ್ಕೆ ಉತ್ತರಪ್ರದೇಶ ಸರ್ಕಾರ ಮುಂದಾಗಿದೆ . 
ಬಾಬರಿ ಮಸೀದಿ ತೀರ್ಪು ಹಿನ್ನೆಲೆ ಸಾಮಾಜಿಕ ತಾಣಗಳ ಮೇಲೆ ನಿರ್ಬಂಧ
ಬಾಬರಿ ಮಸೀದಿ ತೀರ್ಪು ಹಿನ್ನೆಲೆ ಸಾಮಾಜಿಕ ತಾಣಗಳ ಮೇಲೆ ನಿರ್ಬಂಧ

ಲಖನೌ: ರಾಮಜನ್ಮಭೂಮಿ-ಬಾಬ್ರಿ ಮಸೀದಿ ಮೂಲ ನಿವೇಶನ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ತೀರ್ಪು ಸದ್ಯವೇ ಬರುವ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳ ನಿಯಂತ್ರಣಕ್ಕೆ ಉತ್ತರಪ್ರದೇಶ ಸರ್ಕಾರ ಮುಂದಾಗಿದೆ . 

ಜನರು ವಾಟ್ಸಪ್, ಟ್ವೀಟರ್, ಟೆಲಿಗ್ರಾಮ್ ಹಾಗೂ ಇನ್ಸ್ ಸ್ಟಾಗ್ರಾಂ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ತೆರನಾದ ಮಾನಹಾನಿಯಾಗುವಂತಹ, ಧಕ್ಕೆ ತರುವಂತಹ ವಿಷಯಗಳನ್ನು ಹಂಚಿಕೊಳ್ಳದಂತೆ ನಿರ್ಬಂಧ ವಿಧಿಸಿ ಉತ್ತರಪ್ರದೇಶ ಸರ್ಕಾರ ನಾಲ್ಕುಪುಟಗಳ ನಿರ್ದೇಶನ ನೀಡಿದೆ ಎಂದೂ ವರದಿಯಾಗಿದೆ. 

ಸುಮಾರು ಎರಡು ತಿಂಗಳ ಕಾಲ ಈ ನಿರ್ಬಂಧ ಅಯೋಧ್ಯೆಯಲ್ಲಿ ಮುಂದುವರಿಯಲಿದ್ದು, ಈ ಸಮಯದಲ್ಲಿ ವಿದ್ಯುನ್ಮಾನ ಮಾಧ್ಯಮಗಳಲ್ಲಿ ನಡೆಯಲಿರುವ ಯಾವುದೇ ಚರ್ಚೆಯನ್ನು ನಡೆಸದಂತೆ ನಿರ್ಬಂಧ ಹೇರಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com