ಮುಖ್ಯಮಂತ್ರಿ ಹುದ್ದೆ ಹಂಚಿಕೆ ಸಂಬಂಧ ಶಿವಸೇನಾ ಜೊತೆಗೆ ಒಪ್ಪಂದವಾಗಿಲ್ಲ- ಗಡ್ಕರಿ

ಮುಖ್ಯಮಂತ್ರಿ ಹುದ್ದೆ ಹಾಗೂ ಸಂಪುಟದಲ್ಲಿ ಸಮಾನ ಹಂಚಿಕೆ ಸಂಬಂಧ ಶಿವಸೇನೆಯೊಂದಿಗೆ ಯಾವುದೇ ಒಪ್ಪಂದವಾಗಿಲ್ಲ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ನಿತಿನ್ ಗಡ್ಕರಿ
ನಿತಿನ್ ಗಡ್ಕರಿ

ಮುಂಬೈ: ಮುಖ್ಯಮಂತ್ರಿ ಹುದ್ದೆ ಹಾಗೂ ಸಂಪುಟದಲ್ಲಿ ಸಮಾನ ಹಂಚಿಕೆ ಸಂಬಂಧ ಶಿವಸೇನೆಯೊಂದಿಗೆ ಯಾವುದೇ ಒಪ್ಪಂದವಾಗಿಲ್ಲ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

ಗಡ್ಕರಿ ಅವರ  ಈ  ಹೇಳಿಕೆ ಮೂಲಕ ಮಹಾರಾಷ್ಟ್ರದಲ್ಲಿ ಶಿವಸೇನೆಯೊಂದಿಗೆ ಮುಖ್ಯಮಂತ್ರಿ ಹುದ್ದೆ ಹಂಚಿಕೆಯನ್ನು ಒಪ್ಪಿಕೊಳ್ಳದಿರುವ ನಿಲುವನ್ನು ಬಿಜೆಪಿ ದೃಢಪಡಿಸಿದೆ. 

ಮಹಾರಾಷ್ಟ್ರದಲ್ಲಿ ಅಧಿಕಾರ ಹಂಚಿಕೆ ಸಂಬಂಧಿಸಿದಂತೆ ಬಿಜೆಪಿ ಹಾಗೂ ಶಿವಸೇನಾ ನಡುವೆ ಮಧ್ಯಸ್ಥಿಕೆ ವಹಿಸುವುದಿಲ್ಲ ಎಂದು ನಿತಿನ್ ಗಡ್ಕರಿ ತಿಳಿಸಿದ್ದಾರೆ. 

ಆದಾಗ್ಯೂ, "ಹೆಚ್ಚಿನ ಸಂಖ್ಯೆಯ ಚುನಾಯಿತ ಶಾಸಕರನ್ನು ಹೊಂದಿರುವ ಪಕ್ಷವು ಮುಖ್ಯಮಂತ್ರಿ ಹುದ್ದೆಯ ಮೇಲೆ ಹಕ್ಕು ಪಡೆಯುತ್ತದೆ ಎಂಬುದನ್ನು ದಿವಂಗತ ಬಾಳಾ ಸಾಹೇಬ್ ಠಾಕ್ರೆ ಕೂಡ ಹಿಂದೊಮ್ಮೆ  ಹೇಳಿದ್ದರು ಎಂದು ಗಡ್ಕರಿ ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com