ನಾಗಪುರ್: ಯುವ ಆಟಗಾರ ಶ್ರೇಯಸ್ ಅಯ್ಯರ್ (62) ಅರ್ಧಶತಕ ಹಾಗೂ ದೀಪಕ್ ಚಹಾರ್ (7ಕ್ಕೆ 6 ) ಹ್ಯಾಟ್ರಿಕ್ ಸೇರಿದಂತೆ ಆರು ವಿಕೆಟ್ ಪಡೆದ ಭರ್ಜರಿ ಪ್ರದರ್ಶನದ ಬಲದಿಂದ ಬಾಂಗ್ಲಾ ವಿರುದ್ಧದ 3ನೇ ಟಿ-20 ಕ್ರಿಕೆಟ್ ಪಂದ್ಯದಲ್ಲಿ ಭಾರತ 30 ರನ್ ಗಳಿಂದ ಗೆದ್ದಿದೆ.
ಈ ಪಂದ್ಯ ಗೆಲ್ಲುವ ಮೂಲಕ ಭಾರತ ಸರಣಿಯನ್ನು 2-1 ರಿಂದ ಗೆದ್ದುಕೊಂಡಿದೆ. ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾದ ಆರಂಭ ಕಳಪೆಯಾಗಿತ್ತು. ರೋಹಿತ್ ಶರ್ಮಾ (2) ಹಾಗೂ ಶಿಖರ್ ಧವನ್ (19) ರನ್ ಕಲೆ ಹಾಕುವಲ್ಲಿ ವಿಫಲರಾದರು. 35 ರನ್ ಗಳಿಗೆ ಎರಡು ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ತಂಡಕ್ಕೆ ಕನ್ನಡಿಗ ಕೆ.ಎಲ್ ರಾಹುಲ್ ಹಾಗೂ ಶ್ರೇಯಸ್ ಅಯ್ಯರ್ ಭರ್ಜರಿ ಜೊತೆಯಾಟದ ಕಾಣಿಕೆ ನೀಡಿದರು.
Advertisement