ನವದೆಹಲಿ:ಶತಮಾನಗಳಷ್ಟು ಹಳೆಯದಾದ ಅಯೋಧ್ಯೆ ವಿವಾದವನ್ನು ಇತ್ಯರ್ಥಗೊಳಿಸುವ ಮೂಲಕ ದೇಶಾದ್ಯಂತ ಭಾರಿ ಜನಮನ್ನಣೆ ಗಳಿಸಿರುವ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರ ಸೇವಾವಧಿ ಇಂದು ಅಂತ್ಯಗೊಳ್ಳಲಿರುವ ಹಿನ್ನೆಲೆಯಲ್ಲಿ ಶುಕ್ರವಾರ ಹೃದಯ ಸ್ಪರ್ಶಿ ಬೀಳ್ಕೂಡುಗೆ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಇತರೆ ಹಿರಿಯ ನ್ಯಾಯಮೂರ್ತಿಗಳು, ಹಿರಿಯ ಅಧಿಕಾರಿಗಳು, ವಕೀಲರ ಸಂಘದ ಅಧ್ಯಕ್ಷರು ಹಾಗೂ ನೂರಾರು ವಕೀಲರು ಕಾರ್ಯಕ್ರಮದಲ್ಲಿ ಪಾಲ್ಗೊಂಡು, ರಂಜನ್ ಗೊಗೊಯ್ ಅವರೊಂದಿನ ಒಡನಾಟದ ಬಗ್ಗೆ ಅನಿಸಿಕೆ ಹಂಚಿಕೊಡರು.
ಶಬರಿಮಲೆ, ಆರ್ ಟಿಐ, ರಫೇಲ್ ಸೇರಿದಂತೆ ಹಲವು ಪ್ರಕರಣಗಳ ಮಹತ್ವದ ತೀರ್ಪಿನ ಹಿನ್ನೆಲೆಯಲ್ಲಿ ರಂಜನ್ ಗೊಗೊಯ್ ಅವರನ್ನು ಮುಕ್ತ ಕಂಠದಿಂದ ಶ್ಲಾಘಿಸಿದರು.
ನಾಳೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ಶರದ್ ಅರವಿಂದ್ ಬೊಬ್ಡೆ ಅಧಿಕಾರ ಸ್ವೀಕರಿಸಲಿದ್ದಾರೆ.
Advertisement