ಇಡಿ ತನಿಖೆ ಎದುರಿಸುತ್ತಿರುವ ಸಂಸ್ಥೆಯಿಂದ ಬಿಜೆಪಿ ದೇಣಿಗೆ ಸ್ವೀಕರಿಸುತ್ತಿದೆ: ಕಾಂಗ್ರೆಸ್ 

ಭೂಗತ ಪಾತಕಿ ದಾವೂದ್ ಇಬ್ರಾಹಿಂ ಆಪ್ತನಿಂದ ಆಸ್ತಿ ಖರೀದಿಸಿದ ಆರೋಪ ಎದುರಿಸುತ್ತಿರುವ ಕಂಪನಿಯಿಂದ ಬಿಜೆಪಿ ಕೋಟ್ಯಾಂತರ ರೂಪಾಯಿ ದೇಣಿಗೆ ಸ್ವೀಕರಿಸುತ್ತಿದೆ ಎಂದು ಕಾಂಗ್ರೆಸ್ ಶುಕ್ರವಾರ ಆರೋಪಿಸಿದೆ.
ರಂದೀಪ್ ಸುರ್ಜೇವಾಲ
ರಂದೀಪ್ ಸುರ್ಜೇವಾಲ

ನವದೆಹಲಿ: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಆಪ್ತನಿಂದ ಆಸ್ತಿ ಖರೀದಿಸಿದ ಆರೋಪ ಎದುರಿಸುತ್ತಿರುವ ಕಂಪನಿಯಿಂದ ಬಿಜೆಪಿ ಕೋಟ್ಯಾಂತರ ರೂಪಾಯಿ ದೇಣಿಗೆ ಸ್ವೀಕರಿಸುತ್ತಿದೆ ಎಂದು ಕಾಂಗ್ರೆಸ್ ಶುಕ್ರವಾರ ಆರೋಪಿಸಿದೆ.

1993ರ ಮುಂಬೈ ಸ್ಫೋಟ ಪ್ರಕರಣದ ಆರೋಪಿ. ದಿ. ಇಕ್ಬಾಲ್ ಮಿರ್ಚಿಯಿಂದ ಆಸ್ತಿ ಖರೀದಿಸಿದ ಹಾಗೂ ಅಕ್ರಮ ಹಣ ವಹಿವಾಟು ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ)ದ ತನಿಖೆ ಎದುರಿಸುತ್ತಿರುವ ಕಂಪನಿಯಿಂದ ಬಿಜೆಪಿ ದೇಣಿಗೆ ಸ್ವೀಕರಿಸಿದೆ ಎಂಬ ಮಾಧ್ಯಮ ವರದಿಯನ್ನು ಉಲ್ಲೇಖಿಸಿ ಕಾಂಗ್ರೆಸ್ ಮುಖ್ಯ ವಕ್ತಾರ ರಂದೀಪ್ ಸುರ್ಜೇವಾಲ ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ಆರೋಪಕ್ಕೆ ಬಿಜೆಪಿ ತಕ್ಷಣ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com