ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ: ರಾಷ್ಟ್ರಪತಿ ಆಡಳಿತ ಹಿಂಪಡೆತ 

ರಾತ್ರೋರಾತ್ರಿ ನಡೆದ ರಾಜಕೀಯ ಬೆಳವಣಿಗೆ ನಂತರ ಶನಿವಾರ ಬೆಳಗ್ಗೆ ಮಹಾರಾಷ್ಟ್ರದಲ್ಲಿ ಬಿಜೆಪಿ-ಎನ್ ಸಿಪಿ ನೇತೃತ್ವದ ಸರ್ಕಾರ ರಚನೆಯಾಗಿದೆ.
ಗವರ್ನರ್ ಭಗತ್ ಸಿಂಗ್ ಕೊಶ್ಯಾರಿ
ಗವರ್ನರ್ ಭಗತ್ ಸಿಂಗ್ ಕೊಶ್ಯಾರಿ

ನವದೆಹಲಿ: ರಾತ್ರೋರಾತ್ರಿ ನಡೆದ ರಾಜಕೀಯ ಬೆಳವಣಿಗೆ ನಂತರ ಶನಿವಾರ ಬೆಳಗ್ಗೆ ಮಹಾರಾಷ್ಟ್ರದಲ್ಲಿ ಬಿಜೆಪಿ-ಎನ್ ಸಿಪಿ ನೇತೃತ್ವದ ಸರ್ಕಾರ ರಚನೆಯಾಗಿದೆ. ಇದರಿಂದಾಗಿ 10 ದಿನಗಳ ಹಿಂದೆ ಹೇರಿಕೆಯಾಗಿದ್ದ ರಾಷ್ಟ್ರಪತಿ ಆಡಳಿತ ಇಂದು ಬೆಳಗ್ಗೆ 5.47ಕ್ಕೆ ಹಿಂಪಡೆಯಲಾಗಿದೆ. 


ರಾಷ್ಟ್ರಪತಿ ರಾಮನಾಥ್ ಕೋವಿಂದ್ ಗೃಹ ಸಚಿವಾಲಯಕ್ಕೆ ಅಧಿಸೂಚನೆ ಹೊರಡಿಸಿದ್ದು ರಾಷ್ಟ್ರಪತಿ ಆಡಳಿತವನ್ನು ಹಿಂತೆಗೆದುಕೊಳ್ಳುವುದಾಗಿ ಘೋಷಣೆ ಮಾಡಿದ್ದಾರೆ. ಈ ಸಂಬಂಧ ಗೆಜೆಟ್ ಅಧಿಸೂಚನೆಯನ್ನು ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಬಲ್ಲಾ ಇಂದು ಬೆಳಗ್ಗೆ 5.47ಕ್ಕೆ ಹೊರಡಿಸಿದ್ದಾರೆ.


ರಾಷ್ಟ್ರಪತಿ ಆಡಳಿತ ಹೇರಿಕೆ ಹಿಂಪಡೆದ ನಂತರ ಸಿಎಂ ಆಗಿ ದೇವೇಂದ್ರ ಫಡ್ನವಿಸ್ ಮತ್ತು ಡಿಸಿಎಂ ಆಗಿ ಅಜಿತ್ ಪವಾರ್ ಪ್ರಮಾಣವಚನ ಸ್ವೀಕರಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com