ಉಪ ಚುನಾವಣೆ ಮತದಾನ; ಬಿಜೆಪಿ ಅಭ್ಯರ್ಥಿಯನ್ನು ಹಿಗ್ಗಾಮುಗ್ಗ ಥಳಿಸಿದ ಟಿಎಂಸಿ ಕಾರ್ಯಕರ್ತರು!

ಪಶ್ಚಿಮ ಬಂಗಾಳದಲ್ಲಿ 3 ಕ್ಷೇತ್ರಗಳಿಗೆ ಉಪ ಚುನಾವಣೆ ಮತದಾನ ನಡೆಯುತ್ತಿದ್ದು ಈ ವೇಳೆ ಬಿಜೆಪಿ ಅಭ್ಯರ್ಥಿಯನ್ನು ಟಿಎಂಸಿ ಕಾರ್ಯಕರ್ತರು ಹಿಗ್ಗಾಮುಗ್ಗ ಥಳಿಸಿರುವ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಬಿಜೆಪಿ ಅಭ್ಯರ್ಥಿ
ಬಿಜೆಪಿ ಅಭ್ಯರ್ಥಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ 3 ಕ್ಷೇತ್ರಗಳಿಗೆ ಉಪ ಚುನಾವಣೆ ಮತದಾನ ನಡೆಯುತ್ತಿದ್ದು ಈ ವೇಳೆ ಬಿಜೆಪಿ ಅಭ್ಯರ್ಥಿಯನ್ನು ಟಿಎಂಸಿ ಕಾರ್ಯಕರ್ತರು ಹಿಗ್ಗಾಮುಗ್ಗ ಥಳಿಸಿರುವ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿದೆ. 

ಕರೀಂಪುರ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿಯಿಂದ ಜಯ್ ಪ್ರಕಾಶ್ ಮಜುಂದಾರ್ ಸ್ಪರ್ಧಿಸಿದ್ದು ಅವರನ್ನು ಟಿಎಂಸಿಯ ಕಾರ್ಯಕರ್ತರು ಥಳಿಸಿದ್ದಾರೆ. ಈ ವೇಳೆ ಅರೆ ಸೇನಾ ಪಡೆ ಬಂದು ಅವರನ್ನು ರಕ್ಷಿಸಿದ್ದಾರೆ. 

ಈ ಸಂಬಂಧ ತನಿಖೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ಬೆಂಗಾಳದ ಬಿಜೆಪಿ ಮುಖಂಡ ಮುಕುಲ್ ರಾಯ್ ಪತ್ರ ಬರೆದಿದ್ದು ಹಲ್ಲೆ ನಡೆಸಿರುವ ಟಿಎಂಸಿ ಕಾರ್ಯಕರ್ತರ ವಿರುದ್ಧ ಕ್ರಮಕೈಗೊಳ್ಳುಂತೆ ಮನವಿ ಮಾಡಿದ್ದಾರೆ. 

ಇದಕ್ಕೆ ಪ್ರತಿಕ್ರಿಯಿಸಿರುವ ಟಿಎಂಸಿ ಮಜುಂದಾರ್ ಮತಕಟ್ಟೆಯ ಆವರಣವನ್ನು ಪ್ರವೇಶಿಸುತ್ತಿದ್ದರು ಈ ಹಿನ್ನೆಲೆಯಲ್ಲಿ ಅವರ ಮೇಲೆ ಮತದಾದರೇ ಹಲ್ಲೆ ನಡೆಸಿದ್ದಾರೆ ಎಂದು ಹೇಳಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com