ಮುಂಬೈ: ನಾಳೆ ಸಂಜೆ 5 ಗಂಟೆಯೊಳಗೆ ಬಹುಮತ ಸಾಬೀತು ಮಾಡುವಂತೆ ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ಡಿಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದ ಅಜಿತ್ ಪವಾರ್ ರಾಜಿನಾಮೆ ನೀಡಿದ ಬೆನ್ನಲ್ಲೇ ಇದೀಗ ಸಿಎಂ ಸ್ಥಾನಕ್ಕೆ ದೇವೇಂದ್ರ ಫಡ್ನವಿಸ್ ರಾಜಿನಾಮೆ ನೀಡುವ ಸಾಧ್ಯತೆ ಇದೆ.
ತಮ್ಮ ಬಳಿ ಬಹುಮತ ಇಲ್ಲದ ಕಾರಣ ದೇವೇಂದ್ರ ಫಡ್ನವಿಸ್ ರಾಜಿನಾಮೆ ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ.
ಎನ್ ಸಿಪಿಯ ಅಜಿತ್ ಪವಾರ್ ತಮ್ಮೊಂದಿಗೆ ಶಾಸಕರನ್ನು ಕರೆತರುವಲ್ಲಿ ವಿಫಲರಾದ ಹಿನ್ನೆಲೆಯಲ್ಲಿ ಬಿಜೆಪಿ ಮತ್ತು ಎನ್ಸಿಪಿ ಮೈತ್ರಿ ಮುರಿದು ಬೀಳುವ ಸಾಧ್ಯತೆ ಇದೆ.
ಸದ್ಯ ಮಧ್ಯಾಹ್ನ 3.30ರ ಸುಮಾರಿಗೆ ದೇವೇಂದ್ರ ಫಡ್ನವಿಸ್ ಸುದ್ದಿಗೋಷ್ಠಿ ಕರೆದಿದ್ದು ತಮ್ಮ ರಾಜಿನಾಮೆಯ ಕುರಿತು ಸ್ಪಷ್ಟಪಡಿಸುವ ಸಾಧ್ಯತೆ ಇದೆ.
Advertisement