ಬಹುಮತ ಸಾಬೀತುಪಡಿಸುತ್ತೇವೆ: ಮಹಾರಾಷ್ಟ್ರ ಬಿಜೆಪಿ ವಿಶ್ವಾಸ 

ನಾಳೆ ಸಂಜೆಯೊಳಗೆ ಬಹುಮತ ಸಾಬೀತುಪಡಿಸಿ ಎಂದು ಸುಪ್ರೀಂ ಕೋರ್ಟ್ ತೀರ್ಪು ಪ್ರಕಟವಾಗುತ್ತಿದ್ದಂತೆ ನಾವು ಕೋರ್ಟ್ ಆದೇಶವನ್ನು ಗೌರವಿಸುತ್ತೇವೆ. ನಾವು ಬಹುಮತ ಸಾಬೀತುಪಡಿಸಲು ಸಿದ್ದರಿದ್ದೇವೆ, ಅದನ್ನು ನಾವು ಸಾಧಿಸಿ ತೋರಿಸುತ್ತೇವೆ ಎಂದು ಮಹಾರಾಷ್ಟ್ರ ಬಿಜೆಪಿ ಹೇಳಿದೆ. 
ದೇವೇಂದ್ರ ಫಡ್ನವಿಸ್
ದೇವೇಂದ್ರ ಫಡ್ನವಿಸ್

ಮುಂಬೈ: ನಾಳೆ ಸಂಜೆಯೊಳಗೆ ಬಹುಮತ ಸಾಬೀತುಪಡಿಸಿ ಎಂದು ಸುಪ್ರೀಂ ಕೋರ್ಟ್ ತೀರ್ಪು ಪ್ರಕಟವಾಗುತ್ತಿದ್ದಂತೆ ನಾವು ಕೋರ್ಟ್ ಆದೇಶವನ್ನು ಗೌರವಿಸುತ್ತೇವೆ. ನಾವು ಬಹುಮತ ಸಾಬೀತುಪಡಿಸಲು ಸಿದ್ದರಿದ್ದೇವೆ, ಅದನ್ನು ನಾವು ಸಾಧಿಸಿ ತೋರಿಸುತ್ತೇವೆ ಎಂದು ಮಹಾರಾಷ್ಟ್ರ ಬಿಜೆಪಿ ಹೇಳಿದೆ.


ಇಂದು ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ಚಂದ್ರಕಾಂತ್ ಪಾಟೀಲ್, ನಾಳೆ ಸಂಜೆಯೊಳಗೆ ಬಹುಮತ ಸಾಬೀತುಪಡಿಸುವಂತೆ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರಿಗೆ ಸುಪ್ರೀಂ ಕೋರ್ಟ್ ಹೇಳಿದೆ. ಅದನ್ನು ನಾವು ಸಂತೋಷದಿಂದ ಸ್ವೀಕರಿಸಿ ಬಹುಮತ ಸಾಧಿಸಿ ತೋರಿಸುತ್ತೇವೆ ಎಂದರು.


ಇದೇ ಸಂದರ್ಭದಲ್ಲಿ ನ್ಯಾಯಾಲಯ ರಾಜ್ಯಪಾಲ ಕೊಶ್ಯಾರಿ ಅವರಿಗೆ ಹಂಗಾಮಿ ಸ್ಪೀಕರ್ ನೇಮಿಸುವಂತೆ ಮತ್ತು ಎಲ್ಲಾ ಚುನಾಯಿತ ಪ್ರತಿನಿಧಿಗಳಿಗೆ ನಾಳೆಯೊಳಗೆ ಪ್ರತಿಜ್ಞಾವಿಧಿ ಬೋಧಿಸುವಂತೆ ಕೂಡ ತಿಳಿಸಿದ್ದಾರೆ. 


ನಾಳೆಯ ಸಂಪೂರ್ಣ ಕಲಾಪವನ್ನು ನೇರ ಪ್ರಸಾರ ಮಾಡುವಂತೆ ಮತ್ತು ಮುಕ್ತ ಬ್ಯಾಲೆಟ್ ಮತದಾನದ ಮೂಲಕ ಬಹುಮತ ಸಾಬೀತು ಪ್ರಕ್ರಿಯೆ ನಡೆಯಬೇಕೆಂದು ಸುಪ್ರೀಂ ಕೋರ್ಟ್ ಹೇಳಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com