ನವದೆಹಲಿ: ಐಎನ್ಎಕ್ಸ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿರುವ ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ನಾಯಕ ಪಿ ಚಿದಂಬರಂ ಅವರ ನ್ಯಾಯಾಂಗ ಬಂಧನವನ್ನು ಡಿ.11 ರ ವರೆಗೆ ವಿಸ್ತರಣೆ ಮಾಡಲಾಗಿದೆ.
ನ.27 ರಂದು ವಿಶೇಷ ನ್ಯಾಯಾಲಯ ಚಿದಂಬರಂ ಅವರ ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಣೆ ಮಾಡಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿದಂಬರಂ ಅವರು ಮೊದಲ ಬಾರಿಗೆ ಆ.21 ರಂದು ಸಿಬಿಐ ನಿಂದ ಬಂಧನಕ್ಕೊಳಗಾಗಿದ್ದರು. ಅ.22 ರಂದು ಸುಪ್ರೀಂ ಕೋರ್ಟ್ ನಲ್ಲಿ ಜಾಮೀನು ದೊರೆತಿತ್ತು. ಆದರೆ ಅ.22 ರಂದೇ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಚಿದಂಬರಂ ಅವರನ್ನು ವಶಕ್ಕೆ ಪಡೆದಿತ್ತು.
Advertisement