ಮೂರೂ ಪಕ್ಷಗಳು ಇನ್ನೆರಡು ದಿನಗಳಲ್ಲಿ ಖಾತೆ ಹಂಚಿಕೆ ನಿರ್ಧರಿಸಲಿವೆ: ಕಾಂಗ್ರೆಸ್ ಮುಖ್ಯಸ್ಥ ಬಾಳಾಸಾಹೇಬ್ ಥೋರತ್

ಶಿವಸೇನೆ, ಎನ್ ಸಿಪಿ ಮತ್ತು ಕಾಂಗ್ರೆಸ್ ನಡುವೆ ಖಾತೆ ಹಂಚಿಕೆ ಇನ್ನು ಎರಡು ದಿನಗಳಲ್ಲಿ ತೀರ್ಮಾನವಾಗಲಿದೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ಬಾಳಾ ಸಾಹೇಬ್ ಥೋರತ್ ತಿಳಿಸಿದ್ದಾರೆ. 
ಬಾಳಾಸಾಹೇಬ್ ಥೋರತ್
ಬಾಳಾಸಾಹೇಬ್ ಥೋರತ್

ಮುಂಬೈ: ಶಿವಸೇನೆ, ಎನ್ ಸಿಪಿ ಮತ್ತು ಕಾಂಗ್ರೆಸ್ ನಡುವೆ ಖಾತೆ ಹಂಚಿಕೆ ಇನ್ನು ಎರಡು ದಿನಗಳಲ್ಲಿ ತೀರ್ಮಾನವಾಗಲಿದೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ಬಾಳಾ ಸಾಹೇಬ್ ಥೋರತ್ ತಿಳಿಸಿದ್ದಾರೆ.


ಮೂರೂ ಮೈತ್ರಿಕೂಟಗಳನ್ನು ಒಟ್ಟಾಗಿ ಮಹಾರಾಷ್ಟ್ರ ವಿಕಾಸ್ ಅಘಾಡಿ ಎಂದು ಕರೆಯಲಾಗುತ್ತಿದ್ದು ಇವುಗಳು ಸಣ್ಣ ಪಕ್ಷಗಳು ಮತ್ತು ಸ್ವತಂತ್ರ ಶಾಸಕರ ಸಹಾಯದಿಂದ ನಾಳೆ ಸರ್ಕಾರ ರಚಿಸಲಿದ್ದಾರೆ.


ಇಂದು ಶಾಸಕರ ಪ್ರಮಾಣವಚನ ಬಳಿಕ ಮುಂಬೈಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇನ್ನೆರಡು ದಿನಗಳಲ್ಲಿ ಯಾವ ಪಕ್ಷಗಳಿಗೆ ಎಷ್ಟು ಖಾತೆ ಎಂದು ಅಂತಿಮಗೊಳಿಸಲಾಗುವುದು. ಸಂಪುಟ ದರ್ಜೆ ಮತ್ತು ರಾಜ್ಯ ಸಚಿವ ಹುದ್ದೆಗಳನ್ನು ಪ್ರತಿ ಪಕ್ಷಗಳಿಗೆ ನೀಡಲಾಗುತ್ತದೆ ಎಂದರು.


ಶಿವಸೇನೆಯ ಮುಖ್ಯಸ್ಥ ಉದ್ಧವ್ ಠಾಕ್ರೆ ಮುಂದಿನ ಮುಖ್ಯಮಂತ್ರಿಯಾಗಲಿದ್ದು, ನಾಳೆ ಸಂಜೆ ದಾದಾರ್ ನಲ್ಲಿರುವ ಶಿವಾಜಿ ಪಾರ್ಕ್ ನಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಸಮಾರಂಭಕ್ಕೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅಥವಾ ರಾಹುಲ್ ಗಾಂಧಿ ಭಾಗವಹಿಸುವುದು ಇನ್ನೂ ನಿರ್ಧಾರವಾಗಿಲ್ಲ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com