ಮುಂಬೈ: ವಿಧಾನಸಭಾ ನಡವಳಿಗಳನ್ನು ಉಲ್ಲಂಘಿಸಿ ವಿಶ್ವಾಸಮತ ಯಾಚನೆ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ ಎಂದು ಆರೋಪಿಸಿರುವ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಈ ಬಗ್ಗೆ ರಾಜ್ಯಪಾಲರಿಗೆ ದೂರು ಸಲ್ಲಿಸುವುದಾಗಿ ಹೇಳಿದ್ದಾರೆ.
ವಿಶ್ವಾಸಮತ ಯಾಚನೆ ವೇಳೆಯಲ್ಲಿ ಬಿಜೆಪಿ ಸಭಾತ್ಯಾಗ ನಡೆಸಿ ಸದನದಿಂದ ಹೊರಬಂದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಂಗಾಮಿ ಸ್ಪೀಕರ್ ನೇಮಕ ಅಸಂವಿಧಾನಿಕವಾಗಿದೆ. ಈ ಅಧಿವೇಶನ ಅಕ್ರಮ ಹಾಗೂ ಅಸಂವಿಧಾನಿಕವಾಗಿದೆ ಎಂದು ಆರೋಪಿಸಿದರು.
ಇದಕ್ಕೂ ಮುನ್ನ ಕಲಾಪ ಆರಂಭದಲ್ಲಿ ವಿವಿಧ ವಿಚಾರಗಳಿಗೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ , ಪ್ರಶ್ನೆಗಳ ಸುರಿಮಳೆಗರೆದರು.
ಬಿಜೆಪಿ ಸದಸ್ಯರ ಸಭಾತ್ಯಾಗದ ನಂತರ ಸ್ಪೀಕರ್ ದಿಲೀಪ್ ವಾಲ್ಸೆ ಪಾಟೀಲ್ ವಿಶ್ವಾಸ ಮತಯಾಚನೆ ಪ್ರಕ್ರಿಯೆಯನ್ನು ನಡೆಸಿದರು. ಬಿಜೆಪಿಯ ಸಭಾತ್ಯಾಗದ ನಡುವೆ 169 ಸದಸ್ಯರು ಅಘಾಡಿ ಸರ್ಕಾರಕ್ಕೆ ಬೆಂಬಲ ವ್ಯಕ್ತಪಡಿಸಿದರು.
Advertisement