ನವದೆಹಲಿ: ದೇಶಾದ್ಯಂತ ಮಹಾತ್ಮಾ ಗಾಂಧಿಯವರ 150ನೇ ಜಯಂತಿಯನ್ನು ಪಾದಯಾತ್ರೆ ಆಯೋಜಿಸುವ ಮೂಲಕ ಅವಿಸ್ಮರಣೀಯವಾಗಿ ಆಚರಿಸಲು ಕಾಂಗ್ರೆಸ್ ಯೋಜಿಸಿದ್ದು ದೆಹಲಿಯಲ್ಲಿ ಪಕ್ಷದ ನಾಯಕ ರಾಹುಲ್ ಗಾಂಧಿ ಪಾದಯಾತ್ರೆ ಕೈಗೊಳ್ಳಲಿದ್ದಾರೆ.
ಕಾಂಗ್ರೆಸ್ ಪಕ್ಷ ವಾರವಿಡೀ ಕಾರ್ಯಕ್ರಮ ಕೈಗೊಂಡಿದೆ. ದೆಹಲಿಯ ಎಐಸಿಸಿ ಮತ್ತು ಪ್ರದೇಶ ಕಾಂಗ್ರೆಸ್ ಸಮಿತಿಯಲ್ಲಿ ಸಭೆ ಕಾರ್ಯಕ್ರಮಗಳು ನಡೆಯಲಿವೆ. ಜಿಲ್ಲಾ ಮತ್ತು ಬ್ಲಾಕ್ ಕಾಂಗ್ರೆಸ್ ಸಮಿತಿಗಳಲ್ಲಿ ಕೂಡ ಕಾರ್ಯಕ್ರಮ ನಡೆಯಲಿದೆ.
ಒಂದೆಡೆ ಕಾಂಗ್ರೆಸ್ ನಿಂದ ಪಾದಯಾತ್ರೆ ಇನ್ನೊಂದೆಡೆ ಬಿಜೆಪಿಯಿಂದ ಸಂಕಲ್ಪ ಯಾತ್ರೆಯಿಂದಾಗಿ ಗಾಂಧಿ ಜಯಂತಿ ದೇಶಾದ್ಯಂತ ಈ ಬಾರಿ ಕಳೆಕಟ್ಟಿದೆ.
Advertisement