ಇಂದು ಬೆಳಗ್ಗೆಯೇ ಕರ್ನಾಟಕ ರಾಜ್ಯಕ್ಕೆ ನೆರೆ ಪರಿಹಾರ ಹಣ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ 

ರಾಜ್ಯದ ಉತ್ತರ ಕರ್ನಾಟಕ ಸೇರಿದಂತೆ ಹಲವು ಜಿಲ್ಲೆಗಳ ಭೀಕರ ಪ್ರವಾಹ ಸಂತ್ರಸ್ತರಿಗೆ ಪರಿಹಾರ ನೀಡಲು ಕೇಂದ್ರ ಸರ್ಕಾರ ಮುಂದಾಗುತ್ತಿಲ್ಲ ಎಂದು ವಿರೋಧ ಪಕ್ಷಗಳು ಸೇರಿದಂತೆ ಸಾರ್ವಜನಿಕರಿಂದಲೂ ತೀವ್ರ ಟೀಕೆಗಳು ಕೇಳಿಬಂದಿದ್ದವು. 
ನಿರ್ಮಲಾ ಸೀತಾರಾಮನ್
ನಿರ್ಮಲಾ ಸೀತಾರಾಮನ್

ಬೆಂಗಳೂರು: ರಾಜ್ಯದ ಉತ್ತರ ಕರ್ನಾಟಕ ಸೇರಿದಂತೆ ಹಲವು ಜಿಲ್ಲೆಗಳ ಭೀಕರ ಪ್ರವಾಹ ಸಂತ್ರಸ್ತರಿಗೆ ಪರಿಹಾರ ನೀಡಲು ಕೇಂದ್ರ ಸರ್ಕಾರ ಮುಂದಾಗುತ್ತಿಲ್ಲ ಎಂದು ವಿರೋಧ ಪಕ್ಷಗಳು ಸೇರಿದಂತೆ ಸಾರ್ವಜನಿಕರಿಂದಲೂ ತೀವ್ರ ಟೀಕೆಗಳು ಕೇಳಿಬಂದಿದ್ದವು.


ಕೊನೆಗೂ 60 ದಿನಗಳಾದ ನಂತರ ನಿನ್ನೆ ಕೇಂದ್ರ ಸರಕಾರ ರಾಜ್ಯಕ್ಕೆ 1,200 ಕೋಟಿ ರೂಪಾಯಿ ನೆರೆ ಪರಿಹಾರ ನಿಧಿ ನೀಡಿದ್ದು, ಇಂದು  ಬೆಳಗ್ಗೆಯೇ ಹಣ ಬಿಡುಗಡೆ ಮಾಡುವುದಾಗಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.


ಈ ಸಂಬಂಧ ಟ್ವೀಟ್ ಮಾಡಿರುವ ಅವರು, 'ಶನಿವಾರ ಬೆಳಗ್ಗೆಯೇ ನೆರೆ ಪರಿಹಾರ ಹಣವನ್ನು ಬಿಡುಗಡೆ ಮಾಡುವುದಾಗಿ ಹಣಕಾಸು ಸಚಿವಾಲಯ ನನಗೆ ಭರವಸೆ ನೀಡಿದೆ' ಎಂದು ತಿಳಿಸಿದ್ದಾರೆ.


ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ (ಎನ್‌ಡಿಆರ್‌ಎಫ್) 1,813.75 ಕೋಟಿ ರೂಪಾಯಿ ಮಧ್ಯಂತರ ಪರಿಹಾರ ಬಿಡುಗಡೆ ಮಾಡಲಾಗಿದ್ದು, ಅದರಲ್ಲಿ ಕರ್ನಾಟಕಕ್ಕೆ 1,200 ಕೋಟಿ ರೂಪಾಯಿ ಮತ್ತು ಬಿಹಾರಕ್ಕೆ 400 ಕೋಟಿ ರೂಪಾಯಿ ನೀಡಲಾಗಿದೆ. ಈ ಹಣವನ್ನು ಇಂದು (ಶನಿವಾರ) ಬೆಳಗ್ಗೆಯೇ ಬಿಡುಗಡೆ ಮಾಡುವುದಾಗಿ ಸಚಿವೆ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com