ಜಮ್ಮು-ಕಾಶ್ಮೀರ ಗಡಿ ನುಸುಳಲು ಯತ್ನ: ಸೇನೆಯಿಂದ ದಿಟ್ಟ ಉತ್ತರ, ಕಾಲ್ಕಿತ್ತ ಉಗ್ರರು

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಸೆಕ್ಟರ್ ಗಡಿ ನಿಯಂತ್ರಣ ರೇಖೆ ಬಳಿ ಗಡಿ ನುಸಳಲು ಯತ್ನ ನಡೆಸುತ್ತಿದ್ದ ಉಗ್ರರಿಗೆ ಸೇನೆ ದಿಟ್ಟ ಉತ್ತರ ನೀಡಿದ್ದು, ಉಗ್ರರನ್ನು ಹಿಮ್ಮೆಟ್ಟಿಸುವಲ್ಲಿ ಯಶಸ್ವಿಯಾಗಿದ್ದಾರೆಂದು ಭಾನುವಾರ ತಿಳಿದುಬಂದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಸೆಕ್ಟರ್ ಗಡಿ ನಿಯಂತ್ರಣ ರೇಖೆ ಬಳಿ ಗಡಿ ನುಸಳಲು ಯತ್ನ ನಡೆಸುತ್ತಿದ್ದ ಉಗ್ರರಿಗೆ ಸೇನೆ ದಿಟ್ಟ ಉತ್ತರ ನೀಡಿದ್ದು, ಉಗ್ರರನ್ನು ಹಿಮ್ಮೆಟ್ಟಿಸುವಲ್ಲಿ ಯಶಸ್ವಿಯಾಗಿದ್ದಾರೆಂದು ಭಾನುವಾರ ತಿಳಿದುಬಂದಿದೆ. 

ಕಳೆದ ರಾತ್ರಿ 11.30ರ ಸುಮಾರಿಗೆ, 4-5 ಉಗ್ರರು ಗಡಿ ನುಸುಳಲು ಯತ್ನ ನಡೆಸಿದ್ದರು. ಇದನ್ನು ಗಮನಿಸಿದ ಭಾರತೀಯ ಸೇನೆ ಉಗ್ರರಿಗೆ ದಿಟ್ಟ ಉತ್ತರ ನೀಡಿದೆ. ಸೇನೆಯ ದಾಳಿಗೆ ಹೆದರಿದ ಉಗ್ರರು ಮತ್ತೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರದತ್ತ ಕಾಲ್ಕಿತ್ತಿದ್ದಾರೆ. 

ಕೆಲ ದಿನಗಳ ಹಿಂದಷ್ಟೇ ಬಾರಾಮುಲ್ಲಾ ಗಡಿ ನಿಯಂತ್ರಣ ರೇಖೆ ಬಳಿ ಗಡಿ ನುಸುಳಲು ಯತ್ನ ನಡೆಸುತ್ತಿದ್ದ ಇಬ್ಬರು ಉಗ್ರರನ್ನು ಸೇನೆ ಹೊಡೆದುರುಳಿಸಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com