ದೇಶ
18 ಕೋಟಿ ರೂ. ವಂಚನೆ ಪ್ರಕರಣ: ಟಿವಿ 9 ಮಾಜಿ ಸಿಇಒ ರವಿ ಪ್ರಕಾಶ್ ಬಂಧನ
ಟಿವಿ 9 ವಾಹಿನಿ ಪ್ರವರ್ತಕ ಸಂಸ್ಥೆಯಾದ ಅಸೋಸಿಯೇಟೆಡ್ ಬ್ರಾಡ್ಕಾಸ್ಟಿಂಗ್ ಕಂಪೆನಿ (ಎಬಿಸಿಎಲ್)ಯ 18 ಕೋಟಿ ರೂ. ಹಣವನ್ನು ಸ್ವಂತಕ್ಕೆ ಬಳಸಿಕೊಂಡ ಆರೋಪದ ಮೇಲೆ ಬಹುಭಾಷಿಕ ಸುದ್ದಿವಾಹಿನಿ ಟಿವಿ 9 ಮಾಜಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರವಿ ಪ್ರಕಾಶ್ ಅವರನ್ನು ಇಲ್ಲಿನ ಬಂಜಾರ ಹಿಲ್ಸ್ ಪೊಲೀಸರು ಬಂಧಿಸಿದ್ದಾರೆ.
ಹೈದರಾಬಾದ್: ಟಿವಿ 9 ವಾಹಿನಿ ಪ್ರವರ್ತಕ ಸಂಸ್ಥೆಯಾದ ಅಸೋಸಿಯೇಟೆಡ್ ಬ್ರಾಡ್ಕಾಸ್ಟಿಂಗ್ ಕಂಪೆನಿ (ಎಬಿಸಿಎಲ್)ಯ 18 ಕೋಟಿ ರೂ. ಹಣವನ್ನು ಸ್ವಂತಕ್ಕೆ ಬಳಸಿಕೊಂಡ ಆರೋಪದ ಮೇಲೆ ಬಹುಭಾಷಿಕ ಸುದ್ದಿವಾಹಿನಿ ಟಿವಿ 9 ಮಾಜಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರವಿ ಪ್ರಕಾಶ್ ಅವರನ್ನು ಇಲ್ಲಿನ ಬಂಜಾರ ಹಿಲ್ಸ್ ಪೊಲೀಸರು ಬಂಧಿಸಿದ್ದಾರೆ.
ಭಾರತೀಯ ದಂಡ ಸಂಹಿತೆಯ ವಿವಿಧ ಕಲಂಗಳ ಅಡಿ ವಂಚನೆ ಮತ್ತು ಅಪರಾಧ ಉಲ್ಲಂಘನೆ ಸೇರಿದಂತೆ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತಂತೆ ಎಬಿಸಿಎಲ್ನ ಹೊಸ ಆಡಳಿತ ಮಂಡಳಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.ಎಬಿಸಿಎಲ್ನಮಾಜಿ ಮುಖ್ಯ ಹಣಕಾಸು ಅಧಿಕಾರಿ ಎಂ.ಕೆ.ವಿ.ಎನ್ ಮೂರ್ತಿಯನ್ನೂ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.