ಮಹಾರಾಷ್ಟ್ರ: ಬಿಜೆಪಿ ನಾಯಕ ರವೀಂದ್ರ ಖರತ್ ಸೇರಿ ನಾಲ್ವರ ಬರ್ಬರ ಹತ್ಯೆ

ಬಿಜೆಪಿ ಮುಖಂಡ ರವೀಂದ್ರ ಖರತ್ ಹಾಗೂ ಅವರ ಕುಟುಂಬದ ನಾಲ್ವರು ಸದಸ್ಯರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ ಜಲ್ಗಾಂವ್ ಜಿಲ್ಲೆಯಲ್ಲಿ ಭಾನುವಾರ ರಾತ್ರಿ ನಡೆದಿದೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಬಿಜೆಪಿ ಮುಖಂಡ ರವೀಂದ್ರ ಖರತ್ ಹಾಗೂ ಅವರ ಕುಟುಂಬದ ನಾಲ್ವರು ಸದಸ್ಯರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ ಜಲ್ಗಾಂವ್ ಜಿಲ್ಲೆಯಲ್ಲಿ ಭಾನುವಾರ ರಾತ್ರಿ ನಡೆದಿದೆ. 

ಕಳೆದ ರಾತ್ರಿ 9.30ರ ರವೀಂದ್ರ ಹಾಗೂ ಅವರ ಕುಟುಂಬ ಸದಸ್ಯರು ತಮ್ಮ ನಿವಾಸದಲ್ಲಿದ್ದ ಸಂದರ್ಭದಲ್ಲಿಯೇ ದುಷ್ಕರ್ಮಿಗಳು ಹತ್ಯೆ ಮಾಡಿ, ಸ್ಥಳದಿಂದ ಕಾಲ್ಕಿತ್ತಿದ್ದಾರೆ. 

ಬಿಜೆಪಿ ನಾಯಕ ರವೀಂದ್ರ ಖರತ್, ಸಹೋದರ ಸುನೀಲ್ ಖರತ್, ಪುತ್ರ ರೋಹಿತ್ ಹಾಗೂ ಪ್ರೇಮ್ ಸಾಗರ್, ಗೆಳೆಯ ಸುಮಿತ್ ಫೆಡ್ರೆಯವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆಂದು ಪೊಲೀಸರು ಮಾಹಿತಿ ನೀಡಿದ್ದಾರೆ. 

ಮನೆಯ ಹೊರಾಂಗಣದಲ್ಲಿ ದಾಳಿ ನಡೆಸಿರುವ ದುಷ್ಕರ್ಮಿಗಳು ಇಬ್ಬರನ್ನು ಸ್ಥಳದಲ್ಲಿಯೇ ಹತ್ಯೆ ಮಾಡಿದ್ದಾರೆ. ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗದ ಮಧ್ಯೆಯೇ ಸಾವನ್ನಪ್ಪಿದ್ದಾರೆಂದು ತಿಳಿಸಿದ್ದಾರೆ. 

ಹತ್ಯೆಗೆ ದುಷ್ಕರ್ಮಿಗಳು ಗನ್ ಹಾಗೂ ಕೆಲ ಶಸ್ತ್ರಾಗಳಿಂದ ದಾಳಿ ನಡೆಸಿದ್ದು, ಹತ್ಯೆ ಬಳಿಕ ಅವುಗಳನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ. ಹತ್ಯೆ ವೈಯಕ್ತಿಕ ದ್ವೇಷದಿಂದ ನಡೆಸಲಾಗಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಪ್ರಸ್ತುತ ಪ್ರಕರಣ ಸಂಬಂಧ ಮೂವರನ್ನು ವಶಕ್ಕೆ ಪಡೆಯಲಾಗಿದೆ. ಘಟನೆಯಲ್ಲಿ ದುಷ್ಕರ್ಮಿಗಳಿಗೂ ಕೆಲ ಗಾಯಗಳಾಗಿವೆ ಎಂಬುದು ತನಿಖೆ ವೇಳೆ ತಿಳಿದುಬಂದಿದೆ, ತನಿಖೆ ಮುಂದುವರೆದಿದೆ ಎಂದಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com