ನವದೆಹಲಿ: ಅಯೋಧ್ಯೆಯ ರಾಮಮಂದಿರ ಹಾಗೂ ಬಾಬ್ರಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡುವ ತೀರ್ಪನ್ನು ಪ್ರತಿಯೊಬ್ಬರೂ ಗೌರವಿಸಬೇಕು ಎಂದು ಬಹುಜನ ಸಮಾಜ ಪಕ್ಷ (ಬಿಎಸ್ ಪಿ) ವರಿಷ್ಠೆ ಮಾಯಾವತಿ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ರಾಮಮಂದಿರ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಪ್ರತಿನಿತ್ಯ ವಿಚಾರಣೆ ನಡೆಸುತ್ತಿದ್ದು, ಅದು ನೀಡುವ ತೀರ್ಪನ್ನು ಪ್ರತಿಯೊಬ್ಬರೂ ಗೌರವಿಸಬೇಕು ಮತ್ತು ದೇಶದಲ್ಲಿ ಕೋಮು ಸೌಹಾರ್ದತೆ ಕಾಪಾಡಬೇಕು. ಇದು ಜನರು ಮತ್ತು ದೇಶದ ಹಿತಾಸಕ್ತಿಯಿಂದ ಉತ್ತಮ ಎಂದರು.
ಸುಪ್ರೀಂಕೋರ್ಟ್ ನ ವಿಶೇಷ ನ್ಯಾಯಪೀಠ ಈ ಪ್ರಕರಣದ ವಿಚಾರಣೆ ನಡೆಸುತ್ತಿದ್ದು, ಅ. 18ರಂದು ವಾದ ಪ್ರತಿವಾದ ಸಲ್ಲಿಸಲು ಕೊನೆಯ ದಿನ ಎಂದು ಘೋಷಿಸಿದೆ.
Advertisement