ನವದೆಹಲಿ: ಆರ್ಟಿಕಲ್ 370 ರದ್ದಿನ ನಂತರ ಕಾಶ್ಮೀರದಲ್ಲಿ ರಕ್ತ ಹರಿಯಲಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಹೇಳಿದ್ದರು. ಆದರೆ ಕಾಶ್ಮೀರದಲ್ಲಿ ಒಂದೇ ಒಂದು ಗುಂಡು ಸಹ ಸಿಡಿದಿಲ್ಲ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
370ನೇ ವಿಧಿ ರದ್ದು ಮಾಡಿರುವ ನಿರ್ಧಾರವನ್ನು ರಾಹುಲ್ ಗಾಂಧಿ ಮತ್ತು ಶರದ್ ಪವಾರ್ ವಿರೋಧಿಸಿದ್ದರು. ಯಾಕೆ ಈ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದರು ಎಂದು ಮಹಾರಾಷ್ಟ್ರದ ಜನತೆಗೆ ಹೇಳಲಿ ಎಂದು ಅಮಿತ್ ಶಾ ಆಗ್ರಹಿಸಿದ್ದಾರೆ.
ಮಹಾರಾಷ್ಟ್ರದ ಸಂಗ್ಲಿ ಜಿಲ್ಲೆಯ ಜಾಟ್ ನಲ್ಲಿ ಚುನಾವಣಾ ರ್ಯಾಲಿ ನಡೆಸಿದ ಅಮಿತ್ ಶಾ 370ನೇ ವಿಧಿ ರದ್ದಿತಿ ವಿರೋಧಿಸಿದ್ದ ಎನ್ಸಿಪಿ ಮತ್ತು ಕಾಂಗ್ರೆಸ್ ವಿರುದ್ಧ ಟೀಕಾ ಪ್ರಹಾರ ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ವಿಶ್ವಸಂಸ್ಥೆಗೆ ಭೇಟಿ ಕೊಟ್ಟು ಬಂದಿದ್ದು ಸಂವಿಧಾನದ 370ನೇ ವಿಧಿ ರದ್ದು ಮಾಡಿದ ನಿರ್ಧಾರವನ್ನು ಇಡೀ ಜಗತ್ತೇ ಒಪ್ಪಿಕೊಂಡಿದೆ ಎಂದರು.
Advertisement