ಒಡಿಶಾ: ವಿಶ್ವದಲ್ಲಿ ಅತ್ಯಂತ ಸಂತೋಷದಿಂದ ಇರುವ ಮುಸ್ಲಿಮರು ಕಾಣಸಿಗುವುದು ಭಾರತದಲ್ಲಿ ಇದಕ್ಕೆ ಕಾರಣ ಹಿಂದೂ ಸಂಸ್ಕೃತಿ ಎಂದು ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಹೇಳಿದ್ದಾರೆ.
9 ದಿನಗಳ ಕಾಲ ಒಡಿಶಾ ಪ್ರವಾಸದಲ್ಲಿರುವ ಮೋಹನ್ ಭಾಗ್ವತ್ ಅಖಿಲ ಭಾರತೀಯ ಕಾರ್ಯಕಾರಿ ಮಂಡಲದಲ್ಲಿ ಭಾಗಿಯಾಗಿ ಮಾತನಾಡಿದ್ದಾರೆ. ಇದೇ ಮೊದಲ ಬಾರಿಗೆ ಒಡಿಶಾದಲ್ಲಿ ಆರ್ ಎಸ್ಎಸ್ ನ ವಾರ್ಷಿಕ ಸಭೆ ನಡೆಯುತ್ತಿದೆ.
ಹಿಂದೂ ಎನ್ನುವುದು ಧರ್ಮ ಅಥವಾ ಭಾಷೆಯಲ್ಲ. ಅದು ದೇಶದ ಹೆಸರೂ ಅಲ್ಲ. ಹಿಂದೂ ಎನ್ನುವುದು ಭಾರತದಲ್ಲಿ ಜೀವಿಸುತ್ತಿರುವ ಜನರ, ವಿವಿಧತೆಯನ್ನು ಗೌರವಿಸುವ ಒಪ್ಪಿಕೊಳ್ಳುವ ಸಂಸ್ಕೃತಿ ಎಂದು ಮೋಹನ್ ಭಾಗ್ವತ್ ಅಭಿಪ್ರಾಯಪಟ್ಟಿದ್ದಾರೆ.
ಸರಿ ದಾರಿಯಿಂದ ಯಾವುದೇ ದೇಶ ಹೊರನಡೆದರೆ ಅದು ಸತ್ಯದ ಶೋಧನೆಗಾಗಿ ನಮ್ಮಲ್ಲಿ ಬರುತ್ತದೆ. ಜ್ಯೂಗಳು ಆಶ್ರಯಕ್ಕಾಗಿ ಎದುರು ನೋಡುತ್ತಿದ್ದಾಗ ಅವರಿಗೆ ಆಶ್ರಯ ನೀಡಿದ ಏಕೈಕ ರಾಷ್ಟ್ರ ಭಾರತವಾಗಿತ್ತು. ಭಾರತದಲ್ಲಿ ಅತ್ಯಂತ ಸಂತೋಷವಾಗಿರುವ ಮುಸ್ಲಿಮರು ಕಾಣಸಿಗುತ್ತಾರೆ. ಏಕೆಂದರೆ ನಾವು ಹಿಂದೂಗಳು, ಆರ್ ಎಸ್ಎಸ್ ಹಾಗೂ ಸಮಾಜ ಒಟ್ಟಿಗೆ ಕಾರ್ಯ ನಿರ್ವಹಿಸಬೇಕು, ಒಂದೇ ಸಂಘಟನೆಯಾಗಿ ಕಾರ್ಯನಿರ್ವಹಿಸಬೇಕೆಂಬುದು ತಮ್ಮ ಆಶಯವಾಗಿದೆ ಎಂದು ಭಾಗ್ವತ್ ಹೇಳಿದ್ದಾರೆ.
Advertisement