ನವದೆಹಲಿ: ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿರುವ ಮಾಜಿ ಸಚಿವ ಡಿ.ಕೆ. ಶಿವಕುಮಾರ್ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ನಾಳೆಗೆ ಮುಂದೂಡಿದೆ.
ಕಾಂಗ್ರೆಸ್ಟ್ರಬಲ್ ಶೂಟರ್ ಜಾಮೀನು ಅರ್ಜಿ ವಿಚಾರಣೆ ಇಂದು ಹೈಕೋರ್ಟ್ನಲ್ಲಿ ನಡೆದಿದ್ದು, ನ್ಯಾಯಮೂರ್ತಿ ಸುರೇಶ್ ಕುಮಾರ್ ಕೈಟಾ ನೇತೃತ್ವದ ಏಕಸದಸ್ಯ ಪೀಠ ತೀರ್ಪು ನೀಡಿದೆ.
ನಾಳೆ ಇಡಿ ವಿಶೇಷ ನ್ಯಾಯಾಲಯದಲ್ಲಿ ಅರ್ಜಿ ವಿಚಾರಣೆ ಇರುವ ಹಿನ್ನೆಲೆಯಲ್ಲಿ ನಾಳೆಗೆ ಜಾಮೀನು ಅರ್ಜಿ ವಿಚಾರಣೆ ಮುಂದೂಡುವ ಬಗ್ಗೆ ನ್ಯಾಯಮೂರ್ತಿ ಸುರೇಶ್ ಕುಮಾರ್ ವಕೀಲರ ಅಭಿಪ್ರಾಯ ಕೇಳಿದ್ದರು.
ಇಡಿ ಪರ ವಕೀಲರು ನ್ಯಾಯಾಲಯಕ್ಕೆ ತಮ್ಮ ತನಿಖೆಯ ಬಗ್ಗೆ ವರದಿ ಸಲ್ಲಿಸಿದ್ದರು. ಡಿಕೆಶಿ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ನಾಳೆಗೆ ಮುಂದೂಡಿದೆ.
ಈ ಹಿಂದೆಯೇ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ದಸರಾ ಹಬ್ಬದ ಕಾರಣ ಮುಂದೂಡಲಾಗಿತ್ತು. ಇಡಿ ವಿಶೇಷ ನ್ಯಾಯಾಲಯ ಜಾಮೀನು ರದ್ದು ಮಾಡಿದ್ದ ಆದೇಶ ಪ್ರಶ್ನಿಸಿ ಡಿ.ಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಹೈಕೋರ್ಟ್ ಮತ್ತೆ ಕೈಗೆತ್ತಿಕೊಂಡಿತ್ತು.
Advertisement