ಜಮ್ಮು-ಕಾಶ್ಮೀರ: ಗುಂಡಿಕ್ಕಿ ಟ್ರಕ್ ಡ್ರೈವರ್ ಹತ್ಯೆಗೈದ ಉಗ್ರರು,ಸೇಬು ಮಾಲೀಕನಿಗೆ ಥಳಿತ

ಕಣಿವೆ ರಾಜ್ಯ ಜಮ್ಮು- ಕಾಶ್ಮೀರದ ಶೋಪಿಯನ್ ಜಿಲ್ಲೆಯಲ್ಲಿ ಸೇಬುಗಳನ್ನು ಸಾಗಿಸಲಾಗುತ್ತಿದ್ದ ಟ್ರಕ್ ಡ್ರೈವರ್ ನನ್ನು ಉಗ್ರರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಜಮ್ಮು- ಕಾಶ್ಮೀರ: ಕಣಿವೆ ರಾಜ್ಯ ಜಮ್ಮು- ಕಾಶ್ಮೀರದ ಶೋಪಿಯನ್ ಜಿಲ್ಲೆಯಲ್ಲಿ ಸೇಬುಗಳನ್ನು ಸಾಗಿಸಲಾಗುತ್ತಿದ್ದ ಟ್ರಕ್ ಡ್ರೈವರ್ ನನ್ನು ಉಗ್ರರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಉಗ್ರರು ಪಾಕಿಸ್ತಾನದವರು ಎಂದು ಅಧಿಕಾರಿಗಳು ಶಂಕಿಸಿದ್ದಾರೆ ಎಂದು ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ. 

ಮೃತನನ್ನು ಶರೀಫ್  ಖಾನ್ ಎಂದು ಗುರುತಿಸಲಾಗಿದೆ. ಶಿರ್ಮಾಲ್  ಹಳ್ಳಿಯಲ್ಲಿ ಉಗ್ರರು ಈ ದಾಳಿ ನಡೆಸಿದ್ದಾರೆ. ಸಂವಿಧಾನದ 370ನೇ ವಿಧಿ ರದ್ಧತಿ ನಂತರ 72 ದಿನಗಳ ಕಾಲ ಸಂವಹಾನ ಜಾಲ ಸ್ಥಗಿತಗೊಂಡಿದ್ದ ಕಾಶ್ಮೀರದಲ್ಲಿ ಪೋಸ್ಟ್ ಪೇಯ್ಡ್  ಮೊಬೈಲ್ ಪೋನ್ ಗಳ ಸೇವೆಯನ್ನು ಪುನರ್ ಆರಂಭಿಸಿದ ನಂತರ ಈ ಘಟನೆ ನಡೆದಿದೆ.

ಶರೀಫ್ ಖಾನ್ ನನ್ನು ಹತ್ಯೆಗೈದಿದ್ದರೆ  ಸೇಬು ತೋಟದ ಮಾಲೀಕನಿಗೆ ಹಿಗ್ಗಾಮುಗ್ಗಾ ಥಳಿಸಲಾಗಿದೆ. ರಾಜಸ್ತಾನ ನೋಂದಣಿಯ ಟ್ರಕ್ ಗೆ  ಜಮ್ಮುವಿನಲ್ಲಿ ಬೆಂಕಿ ಹಚ್ಚಲಾಗಿದೆ. ಮೃತದೇಹವನ್ನು ಟ್ರಕ್ ನಿಂದ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com