ಭಾರತದ ಕ್ಷಿಪಣಿ ಮನುಷ್ಯ ಕಲಾಂ ಜನ್ಮದಿನ: ಪ್ರಧಾನಿ ಮೋದಿ ಗೌರವ ನಮನ ಸಲ್ಲಿಕೆ

ಮಾಜಿ ರಾಷ್ಟ್ರಪತಿ ಎ.ಪಿ.ಜೆ.ಅಬ್ದುಲ್ ಕಲಾಂ ಅವರ ಜನ್ಮ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಂಗಳವಾರ, ಭಾರತದ ಕ್ಷಿಪಣಿ ಮನುಷ್ಯನಿಗೆ ಗೌರವ ನಮನ ಸಲ್ಲಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಮಾಜಿ ರಾಷ್ಟ್ರಪತಿ ಎ.ಪಿ.ಜೆ.ಅಬ್ದುಲ್ ಕಲಾಂ ಅವರ ಜನ್ಮ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಂಗಳವಾರ, ಭಾರತದ ಕ್ಷಿಪಣಿ ಮನುಷ್ಯನಿಗೆ ಗೌರವ ನಮನ ಸಲ್ಲಿಸಿದ್ದಾರೆ.

ಕಲಾಂ ಅವರು 21 ನೇ ಶತಮಾನದಲ್ಲಿ ಸದೃಢ ಮತ್ತು ಆಧುನಿಕ ಭಾರತ ನಿರ್ಮಾಣದ ದೃಷ್ಟಿಕೋನವನ್ನು ಹೊಂದಿದ್ದರು ಮತ್ತು ಅದನ್ನು ಸಾಧಿಸಲು ತಮ್ಮ ಇಡೀ ಜೀವನವನ್ನು ಶ್ರಮಿಸಿದರು ಎಂದು ಮೋದಿ ಬಣ್ಣಿಸಿದ್ದಾರೆ.

ಅವರ ಆದರ್ಶಪ್ರಾಯ ಜೀವನವು ಪ್ರತಿಯೊಬ್ಬ ಭಾರತೀಯನಿಗೂ ಸ್ಫೂರ್ತಿಯಾಗಿದೆ. ಡಾ. ಎಪಿಜೆ ಅಬ್ದುಲ್ ಕಲಾಂ ಜಿ ಅವರ ಜಯಂತಿ ಅಂಗವಾಗಿ ಅವರಿಗೆ ಭಾರತ ಗೌರವ ಸಲ್ಲಿಸುತ್ತಿದೆ ಎಂದು ಮೋದಿ ಹೇಳಿದರು.

ಡಾ. ಕಲಾಂ ತಮಿಳುನಾಡಿನ ರಾಮೇಶ್ವರಂನಲ್ಲಿ ಹುಟ್ಟಿ ಬೆಳೆದರು. ಭೌತಶಾಸ್ತ್ರ ಮತ್ತು ಏರೋಸ್ಪೇಸ್ ಎಂಜಿನಿಯರಿಂಗ್ ಅಧ್ಯಯನ ಮಾಡಿ ಅಪಾರ ಸಾಧನೆ ಮಾಡಿದ್ದರು. ಬ್ಯಾಲಿಸ್ಟಿಕ್ ಕ್ಷಿಪಣಿ ಅಭಿವೃದ್ಧಿ ಮತ್ತು ವಾಹನ ತಂತ್ರಜ್ಞಾನವನ್ನು ಉಡಾವಣೆ ಮಾಡುವ ಕ್ಷೇತ್ರದಲ್ಲಿ ಅವರು ಮಾಡಿದ ಕೆಲಸವನ್ನು ಗುರುತಿಸಿ ಅವರನ್ನು 'ಭಾರತದ ಕ್ಷಿಪಣಿ ಮನುಷ್ಯ' ಎಂದು ಕರೆಯಲಾಗುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com