ಆಯುಷ್ಮಾನ್ ಭಾರತ್ ಯೋಜನೆ ಅನುಷ್ಠಾನ- ಗುಜರಾತ್, ತಮಿಳುನಾಡು ಮೊದಲ ಸ್ಥಾನದಲ್ಲಿ

 ವಿಶ್ವದ ಅತಿದೊಡ್ಡ ಆರೋಗ್ಯ ಯೋಜನೆ ಹಾಗೂ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಕಾರ್ಯಕ್ರಮಗಳಲ್ಲಿ ಒಂದಾದ ಆಯುಷ್ಮಾನ್ ಭಾರತ್ ಯೋಜನೆಯನ್ನು ಜಾರಿಗೆ ತರುವಲ್ಲಿ ಗುಜರಾತ್,ತಮಿಳುನಾಡು, ಕೇರಳ ಮತ್ತು ಆಂಧ್ರ ಪ್ರದೇಶ ರಾಜ್ಯಗಳು ಮೊದಲ ಸಾಲಿನಲ್ಲಿವೆ.
ಆಯುಷ್ಮಾನ್ ಭಾರತ್ ಯೋಜನೆ
ಆಯುಷ್ಮಾನ್ ಭಾರತ್ ಯೋಜನೆ

ನವದೆಹಲಿ: ವಿಶ್ವದ ಅತಿದೊಡ್ಡ ಆರೋಗ್ಯ ಯೋಜನೆ ಹಾಗೂ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಕಾರ್ಯಕ್ರಮಗಳಲ್ಲಿ ಒಂದಾದ ಆಯುಷ್ಮಾನ್ ಭಾರತ್ ಯೋಜನೆಯನ್ನು ಜಾರಿಗೆ ತರುವಲ್ಲಿ ಗುಜರಾತ್,ತಮಿಳುನಾಡು, ಕೇರಳ ಮತ್ತು ಆಂಧ್ರ ಪ್ರದೇಶ ರಾಜ್ಯಗಳು ಮೊದಲ ಸಾಲಿನಲ್ಲಿವೆ.

ಕೇಂದ್ರ ಸರ್ಕಾರದ ಆರೋಗ್ಯ ಸಚಿವಾಲಯದ ಅಧಿಕಾರಿಯೊಬ್ಬರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಕಳೆದ ವರ್ಷ ಪ್ರಧಾನಿ ನರೇಂದ್ರ ಮೋದಿ ಅವರು ಈ ಯೋಜನೆಗೆ ಚಾಲನೆ ನೀಡಿದ್ದರು.

ಹತ್ತು ಕೋಟಿ ಕುಟುಂಬಗಳ ಸುಮಾರು ೫೦ ಕೋಟಿ ಜನರಿಗೆ ವಾರ್ಷಿಕವಾಗಿ ಐದು ಲಕ್ಷ ರೂ. ತನಕ ವಿಮೆ ಒದಗಿಸುವ ಆಯುಷ್ಮಾನ್ ಭಾರತ್ ಯೋಜನೆಯಡಿ ಕೇವಲ ೯ ತಿಂಗಳ ಅವಧಿಯಲ್ಲಿ ೭೯೦೧ ಕೋಟಿ ರೂಪಾಯಿಗಳನ್ನು ಬಡವರ ಆರೋಗ್ಯ ಸುಧಾರಣೆಗಾಗಿ ವೆಚ್ಚ ಮಾಡಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com